ಪ್ರಿಯಕರನೊಂದಿಗೆ ಸೇರಿ ಪತಿಗೆ ಮುಹೂರ್ತ ಇಟ್ಟ ಪತ್ನಿ
ಪ್ರಿಯಕರನ ಜತೆ ಸೇರಿ ಗಂಡನನ್ನೇ ಹತ್ಯೆ ಮಾಡಿದ ಪತ್ನಿ ಇದೀಗ ಪೊಲೀಸರ ಅತಿಥಿಯಾಗಿದ್ದು, ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾಳೆ. ಬೋರ್ಗಂ (ಕೆ) ಗ್ರಾಮದ ಮಕ್ಳೂರು ಪ್ರದೇಶದ ನಿವಾಸಿಯಾದ ಪಾಳ್ನಾಟಿ ರಮೇಶ್ ಹತ್ಯೆಯಾದ ವ್ಯಕ್ತಿ. ಹಣದಾಸೆಗಾಗಿ ಈ ದುಷ್ಕೃತ್ಯ ಎಸಗಿದ್ದು, 2 ಕೋಟಿ ರುಪಾಯಿ ವಿಮಾ ಹಣಕ್ಕಾಗಿ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದು ಹೃದಯಾಘಾತದ ನಾಟಕವಾಡಿದ್ದಾಳೆ.