ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಕ್ರೈಂ

ಚಿಕ್ಕಮ್ಮನ ಕೈಯಲ್ಲಿದ್ದ 6 ತಿಂಗಳ ಮಗುವಿನ ಮೇಲೆ ಪಿಟ್‌ಬುಲ್ ಶ್ವಾನದ ದಾಳಿ; ಇಲ್ಲಿದೆ ಭಯಾನಕ ವಿಡಿಯೊ

6 ತಿಂಗಳ ಮಗುವಿನ ಮೇಲೆ ಪಿಟ್‌ಬುಲ್ ಭೀಕರ ದಾಳಿ

ಮಹಿಳೆಯೊಬ್ಬರು ಮಗುವನ್ನು ಎತ್ತಿಕೊಂಡು ವಾಕಿಂಗ್ ಹೋಗುತ್ತಿದ್ದಾಗ ಪಿಟ್‌ಬುಲ್ ನಾಯಿಯೊಂದು ಮಗುವಿನ ಮೇಲೆ ದಾಳಿ ನಡೆಸಿರುವ ಭೀಕರ ಘಟನೆ ಹರಿಯಾಣದ ಸೋನಿಪತ್‌ನಲ್ಲಿ ನಡೆದಿದೆ. ಇದರಿಂದ 6 ತಿಂಗಳ ಮಗು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ನಾಯಿ ದಾಳಿಯ ಸಿಸಿಟಿವಿ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಕೊಚ್ಚಿ ಹೋದ ಕಾರ್‌: ಒಂದೇ ಕುಟುಂಬದ 7 ಜನ ಸೇರಿ 8 ಮಂದಿ ದುರ್ಮರಣ

ಚರಂಡಿಯಲ್ಲಿ ಕೊಚ್ಚಿ ಹೋದ ಕಾರ್‌: 8 ಮಂದಿ ದುರ್ಮರಣ

Madhya Pradesh Road Accident: ದೇವಸ್ಥಾನದ ಬಳಿ ತುಂಬಿ ಹರಿಯುತ್ತಿದ್ದ ಚರಂಡಿಯಲ್ಲಿ ಕಾರ್‌ ಕೊಚ್ಚಿ ಹೋದ ಪರಿಣಾಮ ಒಡಿಶಾದ ಒಂದೇ ಕುಟುಂಬದ ಏಳು ಸದಸ್ಯರು ಮತ್ತು ಟ್ಯಾಕ್ಸಿ ಚಾಲಕ ಸೇರಿ ಎಂಟು ಜನರು ಮೃತಪಟ್ಟಿದ್ದಾರೆ. ಮಾಹಿತಿ ಪಡೆದ ತಕ್ಷಣ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ವಾಹನವನ್ನು ಚರಂಡಿಯಿಂದ ಹೊರತೆಗೆಯಲಾಗಿದೆ.

ಪರೀಕ್ಷೆಯಲ್ಲಿ ಚಾಟ್ ಜಿಪಿಟಿ ಬಳಸಿ ಸಿಕ್ಕಿಬಿದ್ದ ಐಐಟಿ ವಿದ್ಯಾರ್ಥಿ ಆತ್ಮಹತ್ಯೆ

ಐಐಟಿ ವಿದ್ಯಾರ್ಥಿ ಆತ್ಮಹತ್ಯೆ

ಪರೀಕ್ಷೆ ವೇಳೆ ಚಾಟ್ ಜಿಪಿಟಿ ಬಳಸಿ ಸಿಕ್ಕಿಬಿದ್ದ ಐಐಟಿ ಬಾಂಬೆ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಬೈಯಲ್ಲಿ ನಡೆದಿದೆ. ಇದರ ಬಳಿಕ ವಿದ್ಯಾರ್ಥಿಗಳ ಪ್ರತಿಭಟನೆ ಭುಗಿಲೆದ್ದಿದೆ. ಐಐಟಿ ಪವಾಯಿ ಕ್ಯಾಂಪಸ್‌ನಲ್ಲಿ ಕಳೆದ ಆರು ತಿಂಗಳಲ್ಲಿ ನಡೆದಿರುವ ಮೂರನೇ ಆತ್ಮಹತ್ಯೆ ಪ್ರಕರಣ ಇದಾಗಿದೆ.

ಯೋಗೇಶ್ ‌ಗೌಡ ಕೊಲೆ ಪ್ರಕರಣ; ಏಳು ಅಪರಾಧಿಗಳಿಗೆ ಷರತ್ತುಬದ್ಧ ಜಾಮೀನು ನೀಡಿದ ಹೈಕೋರ್ಟ್

ಯೋಗೇಶ್ ‌ಗೌಡ ಕೊಲೆ ಪ್ರಕರಣ; ಏಳು ಅಪರಾಧಿಗಳಿಗೆ ಜಾಮೀನು

Yogesh Gowda murder case: ಶಿಕ್ಷೆ ರದ್ದು ಕೋರಿ ಅರ್ಜಿದಾರರು ಸಲ್ಲಿಸಿರುವ ಮೇಲ್ಮನವಿಗಳು ತೀರ್ಮಾನವಾಗುವ ತನಕ ವಿಚಾರಣಾ ನ್ಯಾಯಾಲಯದ ಆದೇಶವನ್ನು ಅಮಾನತಿನಲ್ಲಿರಿಸಲಾಗಿದೆ ಮತ್ತು ಷರತ್ತುಗಳಿಗೆ ಒಳಪಟ್ಟಂತೆ ಮೇಲ್ಮನವಿದಾರರನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕು ಎಂದು ಹೈಕೋರ್ಟ್ ಆದೇಶಿಸಿದೆ.

Bengaluru Murder Case: ಬೆಂಗಳೂರಿನಲ್ಲಿ ಅಮಾನುಷ ಕೃತ್ಯ; ಹಣಕ್ಕಾಗಿ ಪಕ್ಕದ ಮನೆಯ ಬಾಲಕನನ್ನೇ ಕಿಡ್ನ್ಯಾಪ್‌ ಮಾಡಿ ಕೊಂದ ಯುವಕ!

ಪಕ್ಕದ ಮನೆಯ ಬಾಲಕನನ್ನೇ ಕಿಡ್ನ್ಯಾಪ್‌ ಮಾಡಿ ಕೊಂದ ಯುವಕ!

Bengaluru Murder Case: ಬೆಂಗಳೂರು ನಗರದ ಹೊರವಲಯದ ಚಿಕ್ಕಜಾಲದಲ್ಲಿ ಘಟನೆ ನಡೆದಿದೆ. ಪಕ್ಕದ ಮನೆಯ 13 ವರ್ಷದ ಬಾಲಕನನ್ನು ಪರಿಚಿತ ಯುವಕನೇ ಕಿಡ್ನ್ಯಾಪ್‌ ಮಾಡಿ, ಕೊಲೆ ಮಾಡಿದ್ದಾನೆ. ಹಣಕ್ಕಾಗಿ ಆರೋಪಿ ಕೃತ್ಯ ಎಸಗಿದ್ದು, ಬಾಲಕನ ಮೃತದೇಹವನ್ನು ಕಾರಿನಲ್ಲಿ ಆಂಧ್ರ ಪ್ರದೇಶಕ್ಕೆ ಸಾಗಿಸುತ್ತಿದ್ದಾಗ ಸಿಕ್ಕಿಬಿದ್ದಿದ್ದಾನೆ.

ಹುಟ್ಟು ಹಬ್ಬ ಆಚರಿಸಿ ಐದು ವರ್ಷದ ಪುತ್ರಿಯನ್ನು ಕೊಂದು ಶವ ಫ್ರಿಡ್ಜ್‌ನಲ್ಲಿಟ್ಟ ತಂದೆ; ತಾನೂ ಆತ್ಮಹತ್ಯೆಗೆ ಶರಣು

ಐದು ವರ್ಷದ ಪುತ್ರಿಯನ್ನು ಕೊಂದು, ಶವವನ್ನು ಫ್ರಿಡ್ಜ್‌ನಲ್ಲಿಟ್ಟ ತಂದೆ

Crime News: 40 ವರ್ಷದ ವ್ಯಕ್ತಿಯೊಬ್ಬ ತನ್ನ ಐದು ವರ್ಷದ ಪುತ್ರಿಯನ್ನು ಕೊಂದು ಮೃತದೇಹವನ್ನು ಫ್ರಿಡ್ಜ್‌ನಲ್ಲಿರಿಸಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ. ಪುತ್ರಿ ಹಿಮಾಂಶಿಯನ್ನು ಉಸಿರುಗಟ್ಟಿಸಿ, ನಂತರ ಆಕೆಯ ದೇಹವನ್ನು ರೆಫ್ರಿಜರೇಟರ್‌ನಲ್ಲಿ ಇಟ್ಟು ನೇಣು ಬಿಗಿದುಕೊಂಡಿದ್ದಾನೆ.

ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ: ಮಹಿಳೆಯಿಂದಲೇ ಪ್ರಿಯಕರನ  ಕೊಲೆ, ಶಿರಚ್ಛೇದನ ಮಾಡಿ ಶವ ಹೂತ ನಾಲ್ವರು ಆರೋಪಿಗಳು ಅಂದರ್

ಅಕ್ರಮ ಸಂಬಂಧಕ್ಕೆ ಬಿತ್ತು ಹೆಣ: ಮಹಿಳೆಯಿಂದಲೇ ವ್ಯಕ್ತಿಯ ಕೊಲೆ

Crime News: 31 ವರ್ಷದ ವ್ಯಕ್ತಿಯ ಶಿರಚ್ಛೇದ ಮಾಡಿದ ಆರೋಪದ ಮೇಲೆ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ. ಅಸ್ಸಾಂನ ಜೋರ್ಹತ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಅನಿಲ್ ರಾಜ್‌ಗಢ್ ಎಂದು ಗುರುತಿಸಲಾಗಿದೆ. ಈತ ಸೆಪ್ಟೆಂಬರ್ 12 ರಂದು ನಾಪತ್ತೆಯಾಗಿದ್ದ.

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ; ಮೇಲ್ಸೇತುವೆಯಿಂದ ಕಾರು ಬಿದ್ದು ಮಹಿಳೆ ಸಾವು

ಮಂಡ್ಯ ಬಳಿ ಮೇಲ್ಸೇತುವೆಯಿಂದ ಕಾರು ಬಿದ್ದು ಮಹಿಳೆ ಸಾವು

Mandya Car Accident: ಮಂಡ್ಯದ ಬಳಿಯ ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಭೀಕರ ಅಪಘಾತ ನಡೆದಿದೆ. ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಎಕ್ಸ್‌ಪ್ರೆಸ್‌ವೇ ಫ್ಲೈ ಓವರ್‌ನಿಂದ ಹಾರಿ ಅಂಡರ್ ಪಾಸ್‌ಗೆ ಬಿದ್ದಿದೆ. ಇದರಿಂದ ಗಂಭೀರಾಗಿ ಗಾಯಗೊಂಡು ಮಹಿಳೆ ಮೃತಪಟ್ಟಿದ್ದಾರೆ.

ನಿಠಾರಿ ಹತ್ಯಾಕಾಂಡ ಕೇಸ್‌; ಖುಲಾಸೆಗೊಂಡಿದ್ದ ಸುರೇಂದರ್ ಕೋಲಿ ಹರಿದ್ವಾರದಲ್ಲಿ ಆತ್ಮಹತ್ಯೆಗೆ ಶರಣು

ನಿಠಾರಿ ಹತ್ಯಾಕಾಂಡ ಕೇಸ್‌; ಖುಲಾಸೆಗೊಂಡಿದ್ದ ಸುರೇಂದರ್ ಕೋಲಿ ಆತ್ಮಹತ್ಯೆ

ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ್ದ 2006 ರಲ್ಲಿ ನಡೆದಿದ್ದ ನಿಠಾರಿ ಸರಣಿ ಹತ್ಯಾಕಾಂಡದ ಆರೋಪಿಯಾಗಿ, ನಂತರ ನ್ಯಾಯಾಲಯದಿಂದ ಖುಲಾಸೆಗೊಂಡಿದ್ದ ಸುರೇಂದರ್ ಕೋಲಿ ಹರಿದ್ವಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸದ್ಯ ತನಿಖೆ ನಡೆಯುತ್ತಿದೆ.

ನಾಯಿಗಳಿಗೆ ಆಹಾರವಾದ ಅತ್ಯಾಚಾರ ಸಂತ್ರಸ್ತೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಅತ್ಯಾಚಾರ ಸಂತ್ರಸ್ತೆಯ ದೇಹ ತಿನ್ನುತ್ತಿದ್ದ ನಾಯಿಗಳು

Crime News: ಹೊಲವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅತ್ಯಾಚಾರ ಸಂತ್ರಸ್ತೆಯ ಶವ ಪತ್ತೆಯಾಗಿರುವ ಘಟನೆ ನವದೆಹಲಿಯ ಸ್ವರೂಪ್ ನಗರದಲ್ಲಿ ನಡೆದಿದೆ. ಆಕೆಯ ದೇಹದ ಭಾಗಗಳನ್ನು ನಾಯಿಗಳು ತಿನ್ನುತ್ತಿದ್ದವು ಎಂದು ಸ್ಥಳೀಯರು ಪೊಲೀಸರಿಗೆ ತಿಳಿಸಿದ್ದಾರೆ. ಸಂತ್ರಸ್ತೆ ಮುಖ ಸಂಪೂರ್ಣವಾಗಿ ವಿರೂಪಗೊಂಡಿದ್ದು, ಆಕೆಯ ದೇಹದ ಮೇಲೆ ಚಾಕುವಿನಿಂದ ಇರಿದ ಹಲವು ಗಾಯಗಳಿದ್ದವು.

ಗನ್ ತೋರಿಸಿ ಬಿಜೆಪಿ ಮಾಜಿ ಶಾಸಕನಿಂದ  ಮಹಿಳೆ ಮೇಲೆ ಅತ್ಯಾಚಾರ ಆರೋಪ: ಸಾಥ್ ನೀಡಿದ ಪೊಲೀಸ್ ಸಿಬ್ಬಂದಿ ಮೇಲೂ ಎಫ್ಐಆರ್

ಸಾಮೂಹಿಕ ಅತ್ಯಾಚಾರ: ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ರಕ್ಷಕರೇ ಭಕ್ಷಕರಾಗಿರುವ ಘಟನೆ ಥಾಣೆಯ ಕಲ್ಯಾಣ್ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಒತ್ತೆಯಾಳಾಗಿರಿಸಿಕೊಂಡು ಬಲವಂತವಾಗಿ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ ಎಸಗಿರುವ ಆರೋಪದಲ್ಲಿ ಬಿಜೆಪಿ ಮಾಜಿ ಶಾಸಕ ಮತ್ತು ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಆರೋಪಿಗಳನ್ನು ನರೇಂದ್ರ ಪವಾರ್ ಮತ್ತು ಶೈಲೇಶ್ ಪಾಟೀಲ್ ಎಂದು ಗುರುತಿಸಲಾಗಿದೆ.

ಮದುವೆ ಆಮಿಷ ಒಡ್ಡಿ ಯುವತಿಗೆ ವಂಚನೆ; ಮಾಜಿ ಸಚಿವ ಡಿ. ಸುಧಾಕರ್ ಸಹೋದರನ ಕುಟುಂಬದ ವಿರುದ್ಧ ಎಫ್‌ಐಆರ್

ಮದುವೆ ಆಮಿಷ ಒಡ್ಡಿ ಯುವತಿಗೆ ವಂಚನೆ; ಎಫ್‌ಐಆರ್ ದಾಖಲು

Tumkur News: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಎಸಗಿರುವ ಹಾಗೂ ಲೈಂಗಿಕ ದೌರ್ಜನ್ಯ ನಡೆಸಿರುವ ಗಂಭೀರ ಆರೋಪದ ಮೇಲೆ ಮಾಜಿ ಸಚಿವ ದಿವಂಗತ ಡಿ. ಸುಧಾಕರ್ ಅವರ ಸಹೋದರ ಡಿ.ಎಸ್. ಕುಮಾರ್ ಕುಟುಂಬದ ವಿರುದ್ಧ ತುಮಕೂರು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಒಟ್ಟು ಏಳು ಜನರ ವಿರುದ್ಧ ದೂರು ದಾಖಲಾಗಿದೆ.

ಸಾಲದ ಶೂಲಕ್ಕೆ ಮತ್ತೊಂದು ಬಲಿ; ಬರದಿಂದ ಕೈಕೊಟ್ಟ ಬೆಳೆ: ಹಾವೇರಿಯಲ್ಲಿ ರೈತ ಆತ್ಮಹತ್ಯೆ

ಹಾವೇರಿಯಲ್ಲಿ ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆ

Haveri News: ಸಾಲ ಬಾಧೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ. ಒಂದು ವಾರದ ಹಿಂದೆ ಸಾಲ ಬಾಧೆಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡು ಮನೆಗೆ ಮರಳಿದ್ದರು. ಆದರೆ ಗುರುವಾರ ಮಧ್ಯಾಹ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ವಿವಾಹವಾಗಿ 17 ದಿನದಲ್ಲೇ ಅಮೆರಿಕದಲ್ಲಿ ನಿಗೂಢವಾಗಿ ಮೃತಪಟ್ಟ ಭಾರತೀಯ ವ್ಯಕ್ತಿ: ಪತ್ನಿ ನಾಪತ್ತೆ, ಹೆಚ್ಚಿದ ಅನುಮಾನ

ವಿವಾಹವಾಗಿ 17 ದಿನದಲ್ಲೇ ಅಮೆರಿಕದಲ್ಲಿ ಭಾರತೀಯ ವ್ಯಕ್ತಿಯ ನಿಗೂಢ ಸಾವು

Mohammed Jaber Hussain: ವಿವಾಹವಾಗಿ ಕೇವಲ 17 ದಿನಗಳಲ್ಲೇ ಅಮೆರಿಕದಲ್ಲಿ ನೆಲೆಸಿದ್ದ ಹೈದರಾಬಾದ್‌ ಮೂಲದ ಸಿವಿಲ್ ಎಂಜಿನಿಯರ್ ಮೊಹಮ್ಮದ್ ಜಾಬರ್ ಹುಸೇನ್ (28) ತಮ್ಮ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ಮಗನ ದಿಢೀರ್ ಸಾವಿನ ಆಘಾತದಲ್ಲಿರುವ ಕುಟುಂಬವು, ಆತನ ಶರೀರವನ್ನು ಭಾರತಕ್ಕೆ ತರಲು ನೆರವಾಗುವಂತೆ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ವಿನಂತಿ ಮಾಡಿದೆ.

ಪರಿಹಾರ ಶಿಬಿರಗಳಲ್ಲಿ 25 ಅನುಮಾಸ್ಪದ ಸಾವಿನ ವರದಿ ಸಲ್ಲಿಸಿ: ಮಣಿಪುರದ ಮುಖ್ಯ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ಆದೇಶ

ಮಣಿಪುರದಲ್ಲಿ 25 ಅನುಮಾನಾಸ್ಪದ ಸಾವು: ವರದಿ ಕೇಳಿದ ಸುಪ್ರೀಂ ಕೋರ್ಟ್

ಮಣಿಪುರದ ಪರಿಹಾರ ಶಿಬಿರಗಳಲ್ಲಿ ಸಂಭವಿಸಿದ ಅಸಹಜ ಸಾವುಗಳು ಮತ್ತು ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಸಂಬಂಧಿಸಿ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್ ಮರಣೋತ್ತರ ವರದಿಗಳು ಮತ್ತು ಸಾವಿನ ಕಾರಣಗಳಿಗೆ ಸಂಬಂಧಿಸಿದ ದಾಖಲೆಗಳು ಸೇರಿದಂತೆ ಎಲ್ಲಾ 25 ಅನುಮಾನಾಸ್ಪದ ಸಾವುಗಳ ಬಗ್ಗೆ ವಿವರವಾದ ವರದಿ ಸಲ್ಲಿಸುವಂತೆ ಮಣಿಪುರದ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದೆ.

ಜಿರಾಮ್ ಕಣಿವೆ ಹತ್ಯಾಕಾಂಡ: 13 ವರ್ಷಗಳ ಬಳಿಕ 10 ಮಾವೋವಾದಿಗಳಿಗೆ ಮರಣ ದಂಡನೆ

ಜಿರಾಮ್ ಕಣಿವೆ ಹತ್ಯಾಕಾಂಡ: 10 ಮಾವೋವಾದಿಗಳಿಗೆ ಮರಣದಂಡನೆ

Jiram Valley Massacre: ಹದಿಮೂರು ವರ್ಷಗಳ ಬಳಿಕ ಛತ್ತೀಸ್‌ಗಢದ ಜಿರಾಮ್ ಕಣಿವೆ ಹತ್ಯಾಕಾಂಡದ ಆರೋಪಿಗಳಿಗೆ ಮರಣದಂಡನೆ ವಿಧಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಒಟ್ಟು 10 ಮಂದಿ ಅಪರಾಧಿಗಳನ್ನು ವಿವಿಧ ಕಾನೂನುಗಳ ಅಡಿಯಲ್ಲಿ ತಪ್ಪಿತಸ್ಥರೆಂದು ಘೋಷಿಸಿ ಈ ತೀರ್ಪು ನೀಡಲಾಗಿದೆ. ಇದರ ವಿರುದ್ಧ ಮೇಲ್ಮನವಿ ಸಲ್ಲಿಸಲು ರಕ್ಷಣಾ ಪರ ವಕೀಲರು ನಿರ್ಧರಿಸಿದ್ದಾರೆ.

ಬೆಂಗಳೂರಲ್ಲಿ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಮಚ್ಚಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿದ ಪತಿ!

ಬೆಂಗಳೂರಲ್ಲಿ ಪತ್ನಿಯ ಮೇಲೆ ಆ್ಯಸಿಡ್ ದಾಳಿ ನಡೆಸಿ ಕೊಲೆಗೆ ಯತ್ನಿಸಿದ ಪತಿ

ಪತ್ನಿ ಮೇಲೆ ಆ್ಯಸಿಡ್ ಎರಚಿ ಮಚ್ಚಿನಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಜೆಪಿ ನಗರದ ನಾರಾಯಣ ಕ್ಲೀನಿಕ್ ಬಳಿ ನಡೆದಿದೆ. 26 ವರ್ಷದ ಮಧುಮಿತ ಹಲ್ಲೆಗೊಳಗಾದ ಮಹಿಳೆ. ಮಧುಮಿತ ಮೂಲತಃ ಕೊಲ್ಕತ್ತಾ ಮೂಲದವಳಾಗಿದ್ದು, ಕಳೆದ ಒಂದೂವರೆ ವರ್ಷದಿಂದ ನಾರಾಯಣ ಕ್ಲೀನಿಕ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದಳು.

ಸುಶಾಂತ್ ಸಿಂಗ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣ:  ಆದಿತ್ಯ ಠಾಕ್ರೆಗೆ 500 ಕೋಟಿ ರೂ. ಗಳ ನೋಟಿಸ್

ಆದಿತ್ಯ ಠಾಕ್ರೆಗೆ 500 ಕೋಟಿ ರೂ. ಗಳ ನೋಟಿಸ್

ಬಾಲಿವುಡ್ ನ ದಿವಂಗತ ನಟ ಸುಶಾಂತ್ ಸಿಂಗ್ ಅವರ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯನ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿ ಶಿವಸೇನೆ (ಯುಬಿಟಿ) ನಾಯಕ ಆದಿತ್ಯ ಠಾಕ್ರೆ ಹಾಗೂ ಎನ್‌ಸಿಪಿ (ಎಸ್‌ಪಿ) ನಾಯಕ, ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರಿಗೆ 500 ಕೋಟಿ ರೂ. ಗಳ ನೋಟಿಸ್ ಜಾರಿ ಮಾಡಲಾಗಿದೆ.

ಸಿನಿಮೀಯ ರೀತಿಯಲ್ಲಿ ಯುವತಿಯ ಕಿಡ್ನ್ಯಾಪ್‌ಗೆ ಯತ್ನ; ಬೆಂಗಳೂರಿನಲ್ಲಿ ರಾಜಸ್ಥಾನದ ಗ್ಯಾಂಗ್‌ಗೆ ಹಿಗ್ಗಾಮುಗ್ಗಾ ಥಳಿಸಿದ ಜನ!

ಯುವತಿ ಕಿಡ್ನ್ಯಾಪ್‌ಗೆ ಯತ್ನಿಸಿದ ಗ್ಯಾಂಗ್‌ಗೆ ಹಿಗ್ಗಾಮುಗ್ಗಾ ಥಳಿತ!

Bengaluru Kidnap Case: ಬೆಂಗಳೂರಿನಲ್ಲಿ ರಾಜಸ್ಥಾನ ಮೂಲದ ಯುವತಿಯನ್ನು ಮಾರಕಾಸ್ತ್ರಗಳಿಂದ ಬೆದರಿಸಿ, ಅಪಹರಿಸಲು ಯತ್ನಿಸಿದ ಘಟನೆ ನಡೆದಿದೆ. ಕಿಡ್ನ್ಯಾಪ್‌ಗೆ ಯತ್ನಿಸಿದ ಮೂವರು ಕೂಡ ರಾಜಸ್ಥಾನದವರೆಂದು ತಿಳಿದುಬಂದಿದೆ. ವಿಜಯನಗರದ ಹೊಸಹಳ್ಳಿ ಬಳಿ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಥಳಿಸಿದ್ದಾರೆ.

ಅಮಾವಾಸ್ಯೆ ಪೂಜೆ ನೆಪದಲ್ಲಿ ಒಡವೆ ಪಡೆದು ವಂಚಿಸಿದ ಜ್ಯೋತಿಷಿ; 40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಬೆಂಗಳೂರಿನ ಮಹಿಳೆ!

ಅಮಾವಾಸ್ಯೆ ಪೂಜೆ ನೆಪದಲ್ಲಿ ಒಡವೆ ಪಡೆದು ಮಹಿಳೆಗೆ ವಂಚಿಸಿದ ಜ್ಯೋತಿಷಿ!

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಬಳಿಯ ಜ್ಯೋತಿಷಿ ಮಾತು ನಂಬಿ, ಸುಮಾರು 40 ಲಕ್ಷ ರೂ. ಮೌಲ್ಯದ ಒಡವೆಗಳನ್ನು ನೀಡಿ ಮಹಿಳೆಯೊಬ್ಬರು ಮೋಸ ಹೋಗಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪಾಕಿಸ್ತಾನ ಮೂಲದ ಶಹಜಾದ್ ಭಟ್ಟಿ ಜಾಲವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಕೇಂದ್ರ

ಹಜಾದ್ ಭಟ್ಟಿ ಜಾಲವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಣೆ

SBN as a Terrorist Organisation: ಪಾಕಿಸ್ತಾನ ಮೂಲದ ಶಹಜಾದ್ ಭಟ್ಟಿ ನೆಟ್‌ವರ್ಕ್ (SBN) ಅನ್ನು ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ ಭಯೋತ್ಪಾದಕ ಸಂಘಟನೆ ಎಂದು ಕೇಂದ್ರ ಸರ್ಕಾರ ಘೋಷಿಸಿದೆ. “ಈ ಸಂಘಟನೆಯು ಗಡಿಯುದ್ದಕ್ಕೂ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಮಾದಕ ದ್ರವ್ಯಗಳ (ನಾರ್ಕೋಟಿಕ್ಸ್) ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡಿದೆ” ಎಂದು ಹೇಳಿದೆ.

9 ವರ್ಷದ ಬಾಲಕನಿಗೆ ಹಿಗ್ಗಾಮುಗ್ಗ ಥಳಿಸಿದ ಮದ್ರಸಾ; 30 ಕಿಲೋ ಮೀಟರ್‌ ದೂರದಿಂದ ರಕ್ಷಣೆ

ಶಿಕ್ಷಕನಿಂದ ಹಲ್ಲೆಗೊಳಗಾದ ಬಾಲಕ 30 ಕಿ.ಮೀ. ದೂರದಲ್ಲಿ ಪತ್ತೆ

ಮದ್ರಸಾದಲ್ಲಿ ಶಿಕ್ಷಕನಿಂದ ಹಲ್ಲೆಗೊಳಗಾದ ಬಾಲಕನೊಬ್ಬ ಸುಮಾರು 30 ಕಿಲೋಮೀಟರ್ ದೂರದಲ್ಲಿ ಒಂಟಿಯಾಗಿ ಅಲೆದಾಡುತ್ತಿದ್ದನು. ಬಾಲಕನ ದೇಹದ ಮೇಲೆ ಇದ್ದ ಗಾಯದ ಗುರುತುಗಳನ್ನು ಗಮನಿಸಿದ ಸ್ಥಳೀಯರು ಈ ಬಗ್ಗೆ ಮಕ್ಕಳ ಕಲ್ಯಾಣ ಸಮಿತಿಗೆ (CWC) ಮಾಹಿತಿ ನೀಡಿದರು. ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಬಾಲಕನನ್ನು ರಕ್ಷಿಸಿದರು.

Belagavi Double Murder: ಜಮೀನು ವಿವಾದ; ಗ್ರಾಪಂ ಕಚೇರಿಯೊಳಗೇ ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ-ಮಗಳ ಕೊಲೆ

ಗ್ರಾಪಂ ಕಚೇರಿಯೊಳಗೇ ಮಾರಕಾಸ್ತ್ರಗಳಿಂದ ಕೊಚ್ಚಿ ತಂದೆ-ಮಗಳ ಕೊಲೆ

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದಲ್ಲಿ ಘಟನೆ ನಡೆದಿದೆ. ಆಸ್ತಿ ವಿಚಾರಕ್ಕೆ ಸಂಬಂಧಿಸಿ ಅಣ್ಣತಮ್ಮಂದಿರ ನಡುವೆ ವ್ಯಾಜ್ಯವಿತ್ತು ಎನ್ನಲಾಗಿದೆ. ಈ ನಡುವೆ ವ್ಯಕ್ತಿಯೊಬ್ಬರು ಮಗಳ ಜತೆ ಗ್ರಾಮ ಪಂಚಾಯಿತಿಗೆ ಹೋದ ವೇಳೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆ ಮಾಡಲಾಗಿದೆ.

ಮಣಿಪುರದಲ್ಲಿ ಮತ್ತೆ ಗುಂಡಿನ ದಾಳಿ: ದಂಪತಿ ಸಾವು, ಮಗುವಿಗೆ ತೀವ್ರ ಗಾಯ

ಮಣಿಪುರದಲ್ಲಿ ಗುಂಡಿನ ದಾಳಿ: ನಾಲ್ವರು ಸಾವು

Fresh violence in Manipur: ಮಣಿಪುರದಲ್ಲಿ ಅಪರಿಚಿತ ದುಷ್ಕರ್ಮಿಗಳ ದಾಳಿಯಲ್ಲಿ ಕುಕಿ ಬುಡಕಟ್ಟು ಸಮುದಾಯದ ನಾಲ್ವರು ಮೃತಪಟ್ಟಿದ್ದಾರೆ. ತಮೆಂಗ್ಲಾಂಗ್ ಜಿಲ್ಲೆಯ ಟೋಲೆನ್ ಗ್ರಾಮದಲ್ಲಿ ಮೊದಲ ದಾಳಿ ನಡೆದಿದೆ ಎಂದು ಕುಕಿ ನಾಗರಿಕ ಸಂಘಟನೆಯೊಂದು ತಿಳಿಸಿದೆ. ದಾಳಿಯಲ್ಲಿ ದಂಪತಿ ಮೃತಪಟ್ಟಿದ್ದು, ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದಾನೆ.

Loading...