ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಕ್ರೈಂ

Dowry harssment: ಶಾಕಿಂಗ್‌ ವರದಿ, ವರದಕ್ಷಿಣೆ ಕಿರುಕುಳದಲ್ಲಿ ಬೆಂಗಳೂರು ನಂಬರ್‌ ವನ್!‌

ಶಾಕಿಂಗ್‌ ವರದಿ, ವರದಕ್ಷಿಣೆ ಕಿರುಕುಳದಲ್ಲಿ ಬೆಂಗಳೂರು ನಂಬರ್‌ ವನ್!‌

Bengaluru: ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ ಬಹಿರಂಗ ಪಡಿಸಿದ ಮಾಹಿತಿಯ ಪ್ರಕಾರ 2023ರಲ್ಲಿ ಕರ್ನಾಟಕದಲ್ಲಿ ಮಹಿಳೆಯರು, ಮಕ್ಕಳು ಮತ್ತು ವೃದ್ಧರ ಮೇಲಿನ ಅಪರಾಧಗಳಲ್ಲಿ ಹೆಚ್ಚಳ ಕಂಡುಬಂದಿದೆ. ರಾಜ್ಯದಲ್ಲಿ ಮಹಿಳೆಯರ ಮೇಲೆ ಸಂಭವಿಸಿದ್ದ ಅಪರಾಧ ಸಂಖ್ಯೆ ಶೇಕಡಾ 14 ಕ್ಕಿಂತ ಹೆಚ್ಚು ಏರಿಕೆಯಾಗಿದೆ.

Viral Video: ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆಯ ಮೇಲೆ ನಿರಾಶ್ರಿತ ವ್ಯಕ್ತಿಯಿಂದ ಅತ್ಯಾಚಾರ; ಓಡಿಹೋದ ಆರೋಪಿ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಅಮೆರಿಕದಲ್ಲಿ ಮಹಿಳೆಯ ಮೇಲೆ ನಿರಾಶ್ರಿತ ವ್ಯಕ್ತಿಯಿಂದ ಅತ್ಯಾಚಾರ

36 ವರ್ಷದ ಮಹಿಳೆಯೊಬ್ಬಳ ಮೇಲೆ ಆಕೆಯ ಅಪಾರ್ಟ್‌ಮೆಂಟ್ ಕಟ್ಟಡದೊಳಗೆ ಹಲ್ಲೆ ಹಾಗೂ ಅತ್ಯಾಚಾರ ನಡೆಸಲಾದ ಭಯಾನಕ ಘಟನೆ ಅಮೆರಿಕದ ನ್ಯೂಯಾರ್ಕ್‌ನಲ್ಲಿ ನಡೆದಿದೆ. ಅತ್ಯಾಚಾರ ಮಾಡದಂತೆ ತಡೆಯಲು ಎಷ್ಟು ಹಣ ಬೇಕಾಗುತ್ತದೆ ಎಂದು ಸಂತ್ರಸ್ತೆಯು ಆತನಲ್ಲಿ ಬೇಡಿಕೊಂಡಿದ್ದಾಳೆ.

Munawar Faruqui: ಸ್ಟ್ಯಾಂಡ್ ಅಪ್ ಕಾಮಿಡಿಯನ್ ಮುನಾವರ್ ಫಾರೂಕಿ ಕೊಲೆಗೆ ಸಂಚು; ಇಬ್ಬರು ಅರೆಸ್ಟ್‌

ಮುನಾವರ್ ಫಾರೂಕಿ ಕೊಲೆಗೆ ಸಂಚು; ಆರೋಪಿಗಳ ಬಂಧನ!

Munawar Faruqui: ಸ್ಟ್ಯಾಂಡ್-ಅಪ್ ಕಾಮಿಡಿಯನ್‌ ಮುನಾವರ್ ಫಾರೂಕಿ ಕೊಲೆಗೆ ಸಂಚು ರೂಪಿಸಿದ ಆರೋಪದಲ್ಲಿ ಗೋಲ್ಡಿ ಬ್ರಾರ್ ಗುಂಪಿನ ಇಬ್ಬರು ಸದಸ್ಯರನ್ನು ಗುರುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೈತ್ಪುರ-ಕಾಳಿಂದಿ ಕುಂಜ್ ರಸ್ತೆಯಲ್ಲಿ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯ ವೇಳೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ.

Physical abuse: ರಕ್ಷಕರೇ ಭಕ್ಷಕರು! ಹಣ್ಣು ಮಾರುತ್ತಾ ಬಂದ ಮಹಿಳೆಯನ್ನು ಹುರಿದು ಮುಕ್ಕಿದ ಪೊಲೀಸರು

ಪೊಲೀಸರಿಂದಲೇ ಮಹಿಳೆ ಮೇಲೆ ಗ್ಯಾಂಗ್‌ರೇಪ್‌

ರಕ್ಷಿಸಬೇಕಾದವರೇ ಭಕ್ಷಕರಾದ ಘಟನೆಯೊಂದು ತಮಿಳುನಾಡಿನಲ್ಲಿ (Tamil Nadu Crime News) ನಡೆದಿದೆ. ಹಣ್ಣುಗಳನ್ನು ಮಾರಲೆಂದು ತಮಿಳುನಾಡಿಗೆ ತಾಯಿಯೊಂದಿಗೆ ಬಂದಿದ್ದ ಯುವತಿಯೊಬ್ಬಳ ಮೇಲೆ ಪೊಲೀಸ್ ಸಿಬ್ಬಂದಿ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. ಆರೋಪಿಗಳನ್ನು ಹುದ್ದೆಯಿಂದ ಅಮಾನತುಗೊಳಿಸಿ ಬಂಧಿಸಲಾಗಿದೆ.

Elephant Theft: ಆನೆಯನ್ನೇ ಕದ್ದ ಮಾವುತ... ತನಿಖೆ ವೇಳೆ ಬಯಲಾಯ್ತು ಶಾಕಿಂಗ್‌ ಸಂಗತಿ!

ಆನೆಯನ್ನೇ ಕದ್ದ ಮಾವುತ... ತನಿಖೆ ವೇಳೆ ಬಯಲಾಯ್ತು ಶಾಕಿಂಗ್‌ ಸಂಗತಿ!

ಸುಮಾರು ಎರಡು ವಾರಗಳ ಹಿಂದೆ ಜಾರ್ಖಂಡ್‌ನ ರಾಂಚಿಯಿಂದ ಜೌನ್‌ಪುರಕ್ಕೆ ಕರೆದುಕೊಂಡು ಹೋಗುತ್ತಿದ್ದ ಆನೆಯೊಂದು ಕಳ್ಳತನವಾಗಿದ್ದು, ಈ ಕುರಿತು ವ್ಯಕ್ತಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು. ಇದರ ತನಿಖೆ ಆರಂಭಿಸಿದ ಪೊಲೀಸರು ಹಲವು ಆಘಾತಕಾರಿ ಅಂಶಗಳನ್ನು ಬಹಿರಂಗ ಪಡಿಸಿದ್ದಾರೆ. ಅವುಗಳು ಏನು ಎನ್ನುವುದರ ಕುರಿತು ಇಲ್ಲಿದೆ ಸಂಪೂರ್ಣ ಮಾಹಿತಿ.

Delhi Baba: ದುಬೈ ಶೇಖ್‌ಗೆ ಹುಡುಗಿಯರನ್ನು ಸಪ್ಲೈ ಮಾಡ್ತಿದ್ದನೇ ದೆಹಲಿ ಬಾಬಾ? ಚಾಟ್‌ನಲ್ಲಿ ಬಯಲಾಯ್ತು ಭಯಾನಕ ಸಂಗತಿ!

ದುಬೈ ಶೇಖ್‌ಗೆ ಹುಡುಗಿಯರನ್ನು ಸಪ್ಲೈ ಮಾಡ್ತಿದ್ದನೇ ದೆಹಲಿ ಬಾಬಾ?

17 ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಸ್ವಾಮಿ ಚೈತನ್ಯಾನಂದ ಸರಸ್ವತಿಯು ಯುವತಿಯರ ಮೇಲೆ ನಡೆಸುತ್ತಿದ್ದ ದೌರ್ಜನ್ಯಗಳು ಒಂದೊಂದಾಗಿ ಬೆಳಕಿಗೆ ಬರುತ್ತಿದೆ. ಇದಕ್ಕೆ ಸಾಕ್ಷಿಯಾಗಿ ಇದೀಗ ಆತನ ವಾಟ್ಸಾಪ್ ಚಾಟ್‌ಗಳು ಲಭ್ಯವಾಗಿವೆ. ಈ ಮೂಲಕ ಆತ ದುಬೈ ಶೇಖ್ ಸಂಪರ್ಕವಿರುವ ವ್ಯಕ್ತಿ, ವಿದ್ಯಾರ್ಥಿಯೊಂದಿಗೆ ಮಾತನಾಡಿರುವುದು ಬೆಳಕಿಗೆ ಬಂದಿದೆ.

Viral News: 35 ವರ್ಷದ ಮಹಿಳೆ ಜೊತೆ ಮದುವೆ; ಹನಿಮೂನ್‌ಗೂ ಮೊದಲೇ ಸಾವನ್ನಪ್ಪಿದ 75ರ ವೃದ್ಧ!

ಹನಿಮೂನ್‌ಗೂ ಮೊದಲೇ ಸಾವನ್ನಪ್ಪಿದ 75ರ ವೃದ್ಧ!

75-Year-Old Man Died: 75 ವರ್ಷದ ಸಂಗ್ರರಾಮ್ ಎಂಬ ವ್ಯಕ್ತಿ, ತನ್ನ ಅರ್ಧಕ್ಕಿಂತ ಕಡಿಮೆ ವಯಸ್ಸಿನ ಅಂದರೆ 35 ವರ್ಷದ ಮಹಿಳೆಯನ್ನು ಮದುವೆಯಾಗಿದ್ದ. ಆದರೆ ಮದುವೆಯ ಮಾರನೇ ದಿನ ಬೆಳಗ್ಗೆ ಮೃತಪಟ್ಟಿದ್ದಾನೆ. ಇದೀಗ ಆತನ ಸಾವಿನ ಬಗ್ಗೆ ಹಲವಾರು ಸಂಶಯ ಭುಗಿಲೆದ್ದಿದೆ.

Bengaluru News: ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರ ದುರ್ಮರಣ

ಬೆಂಗಳೂರಿನಲ್ಲಿ ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು ಇಬ್ಬರ ಸಾವು

Bengaluru News: ಕಟ್ಟಡ ನಿರ್ಮಾಣಕ್ಕೆ ಪಿಲ್ಲರ್ ಹಾಕಲು ಮಣ್ಣು ತೆಗೆಯುತ್ತಿದ್ದ ವೇಳೆ ದುರಂತ ಸಂಭವಿಸಿದೆ. ಪಿಲ್ಲರ್‌ಗಾಗಿ 20ಕ್ಕೂ ಹೆಚ್ಚು ಅಡಿ ಮಣ್ಣು ತೆಗೆಯಲಾಗುತ್ತಿತ್ತು. ಈ ವೇಳೆ ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಬಿದ್ದು ಇಬ್ಬರು ಮೃತಪಟ್ಟಿದ್ದಾರೆ.

Blackmail Case: ಮಹಿಳೆಯ ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ 8 ಲಕ್ಷ ವಸೂಲಿ; ಇಬ್ಬರ ವಿರುದ್ಧ ಎಫ್‌ಐಆರ್‌

ಮಹಿಳೆಯ ಖಾಸಗಿ ವಿಡಿಯೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌; ಕೇಸ್‌ ದಾಖಲು

Bengaluru News: ಮಹಿಳೆ ಬಳಿ ಕಷ್ಟ ಎಂದು ಹೇಳಿಕೊಂಡು ಆರೋಪಿಯೊಬ್ಬ 4 ಲಕ್ಷ ರೂ. ಹಣ ಪಡೆದಿದ್ದ. ಆದರೆ, ಮಹಿಳೆ ಹಣ ವಾಪಸ್ ಕೇಳಿದಾಗ ಆಕೆಯ ಖಾಸಗಿ ವಿಡಿಯೋ ಹಾಗೂ ಫೋಟೋ ಇಟ್ಟುಕೊಂಡು, ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದ. ನಂತರ ಹೆಚ್ಚುವರಿ 4 ಲಕ್ಷಕ್ಕೂ ಅಧಿಕ ಪಡೆದಿದ್ದಾನೆ. ಹೀಗಾಗಿ ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

Crime News: ಅತ್ಯಾಚಾರದ ಆರೋಪ ಹೊರಿಸಿದ ಗೆಳತಿ- ಮನನೊಂದು ಯುವಕ ಆತ್ಮಹತ್ಯೆಗೆ ಶರಣು

ಅತ್ಯಾಚಾರದ ಆರೋಪ ಹೊರಿಸಿದ ಗೆಳತಿ; ಯುವಕ ಆತ್ಮಹತ್ಯೆಗೆ ಶರಣು

Engineer suicide: ಗೆಳತಿಯೇ ತನ್ನ ಮೇಲೆ ಅತ್ಯಾಚಾರ ಆರೋಪ ಮಾಡಿದ್ದರಿಂದ ನೊಂದ 29 ವರ್ಷದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಗೌರವ್ ಸವನ್ನಿ ಎಂದು ಗುರುತಿಸಲಾಗಿದೆ. ರೈಲು ಹಳಿಯಲ್ಲಿ ಈತನ ಮೃತದೇಹ ಪತ್ತೆಯಾಗಿತ್ತು. ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಘಟನೆ ನಡೆದಿದೆ.

Crime News: ಇದು ಪ್ರೀತಿ, ಪ್ರೇಮ, ದೋಖಾ ಕೇಸ್‌! ಅಬಾರ್ಷನ್ ಮಾಡುವಂತೆ ಒತ್ತಾಯಿಸಿದ ಪ್ರೇಮಿಯ ಕತ್ತು ಸೀಳಿದ ಬಾಲಕಿ

ಪ್ರೇಮಿಯ ಕತ್ತು ಸೀಳಿ ಕೊಂದ ಬಾಲಕಿ!

Teen kills her boyfriend: 16 ವರ್ಷದ ಅಪ್ರಾಪ್ತೆಯೊಬ್ಬಳು ತನ್ನ ಪ್ರಿಯಕರನ ಗಂಟಲು ಸೀಳಿ ಹತ್ಯೆ ಮಾಡಿದ ಆಘಾತಕಾರಿ ಘಟನೆ ಛತ್ತೀಸ್‍ಗಢದ ರಾಯ್ಪುರದಲ್ಲಿ ನಡೆದಿದೆ. ಗರ್ಭಿಣಿಯಾಗಿರುವ ಅಪ್ರಾಪ್ತ ಬಾಲಕಿಗೆ ಗರ್ಭಪಾತ ಮಾಡಿಸಿಕೊಳ್ಳುವಂತೆ ಒತ್ತಡ ಹೇರಿದ್ದಕ್ಕೆ ಸಿಟ್ಟಿಗೆದ್ದ ಬಾಲಕಿ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.

‌ಮೈಸೂರಿನಲ್ಲಿ ವೇಶ್ಯಾವಾಟಿಕೆ ದಂಧೆ; ಇಬ್ಬರು ಅರೆಸ್ಟ್, ಮೊದಲ ಬಾರಿ ಋತುಮತಿಯಾದ ಬಾಲಕಿಯರೇ ಟಾರ್ಗೆಟ್‌!

ವೇಶ್ಯಾವಾಟಿಕೆ ದಂಧೆ; ಮೊದಲ ಬಾರಿ ಋತುಮತಿಯಾದ ಬಾಲಕಿಯರೇ ಟಾರ್ಗೆಟ್‌!

ಮೈಸೂರಿನ ಒಡನಾಡಿ ಸಂಸ್ಥೆಯ ಪರಶು ಮತ್ತು ಸ್ಟಾನ್ಲಿ ನೀಡಿದ ಮಾಹಿತಿ ಆಧರಿಸಿ ಆರೋಪಿಗಳನ್ನು ಪೊಲೀಸರನ್ನು ಬಂಧಿಸಿದ್ದಾರೆ. ಅಪ್ರಾಪ್ತ ವಯಸ್ಸಿನ ಬಾಲಕಿಯರನ್ನು ವೇಶ್ಯಾವಾಟಿಕೆ ದಂಧೆಗೆ ತಳ್ಳುತ್ತಿದ್ದ ಬೆಂಗಳೂರಿನ ಶೋಭಾ ಮತ್ತು ತುಳಸಿಕುಮಾರ್ ಎಂಬ ಇಬ್ಬರನ್ನು ಬಂಧಿಸಲಾಗಿದೆ.

Self Harming Case: ಪತ್ನಿಯನ್ನು ಕೊಂದು ಸ್ನೇಹಿತನಿಗೆ ವಿಡಿಯೊ ಸಂದೇಶ ಕಳುಹಿಸಿ ಆತ್ಮಹತ್ಯೆ!

ಪತ್ನಿಯನ್ನು ಕೊಂದು ಸ್ನೇಹಿತನಿಗೆ ವಿಡಿಯೊ ಸಂದೇಶ ಕಳುಹಿಸಿದ!

ಸಾಫ್ಟ್‌ವೇರ್‌ ಎಂಜಿನೀಯರ್‌ ಒಬ್ಬ ತನ್ನ ಹೆಂಡತಿಯ ಕತ್ತನ್ನು ಹಿಸುಕಿ ಕೊಂದು ನಂತರ ಆತ್ಮಹತ್ಯೆಗೆ ಶರಣಾಗಿರುವ ಆಘಾತಕಾರಿ ಘಟನೆ ಗುರುಗ್ರಾಮದಲ್ಲಿ ನಡೆದಿದೆ. ಗುರುಗ್ರಾಮದ ವಸತಿ ಸೊಸೈಟಿಯೊಂದರ ಅಪಾರ್ಟ್‌ಮೆಂಟ್‌ನಲ್ಲಿ 30 ವರ್ಷದ ಸಾಫ್ಟ್‌ವೇರ್‌ ಎಂಜಿನಿಯರ್‌ ಅಜಯ್ ಕುಮಾರ್ ತನ್ನ ಹೆಂಡತಿಯ ಕತ್ತು ಹಿಸುಕಿ ಕೊಂದು ನಂತರ ನೇಣಿಗೆ ಶರಣಾಗಿದ್ದಾನೆ.

Prajwal Revanna case: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್‌ಗೆ ಪ್ರಜ್ವಲ್‌ ರೇವಣ್ಣ ಮೇಲ್ಮನವಿ

High court: ಫಾರ್ಮ್ ಹೌಸ್‌ನಲ್ಲಿ 47 ವರ್ಷದ ಮಹಿಳೆಯನ್ನು ಪ್ರಜ್ವಲ್ ಬಲವಂತವಾಗಿ ಅತ್ಯಾಚಾರ ಮಾಡಿದ ಪ್ರಕರಣದಲ್ಲಿ ಸ್ಪೆಷಲ್ ಕೋರ್ಟ್ ನ್ಯಾಯಾಧೀಶರಾದ ಸಂತೋಷ್ ಗಜಾನನ್ ಭಟ್ ಅವರು, ಪ್ರಜ್ವಲ್ ಅವರನ್ನು ದೋಷಿಯೆಂದು ಘೋಷಿಸಿ, ಜೀವಿತಾವಧಿ ಜೈಲು ಮತ್ತು ₹11.50 ಲಕ್ಷ ದಂಡ ವಿಧಿಸಿದ್ದರು.

Death Penalty: ಬಾಲಕಿ ಮೇಲೆ ಅತ್ಯಾಚಾರ; ಕೊಲೆ ಆರೋಪಿಗೆ ಮರಣ ದಂಡನೆ

ಅತ್ಯಾಚಾರ, ಕೊಲೆ ಆರೋಪಿಗೆ ಮರಣ ದಂಡನೆ

ಬೆಳಗಾವಿಯ ರಾಯ್‌ಬಾಗ್ ತಾಲೂಕಿನ ಭರತೇಶ್ ರಾವ್ ಸಾಬ್ ಮಿರ್ಜಿ ಎಂಬಾತ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದು, ಆತನಿಗೆ ಪೋಸ್ಕೊ ಕಾಯ್ದೆಯಡಿ ನ್ಯಾಯಾಲಯ ಮರಣದಂಡನೆ ವಿಧಿಸಿದೆ. ಈ ಘಟನೆ 2019ರ ಅಕ್ಟೋಬರ್‌ನಲ್ಲಿ ನಡೆದಿತ್ತು.

Lawrence Bishnoi Gang: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದನೆ ಗುಂಪು ಎಂದು ಘೋಷಿಸಿದ ಕೆನಡಾ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಭಯೋತ್ಪಾದಕರು ಎಂದ ಕೆನಡಾ

ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಅನ್ನು ಭಯೋತ್ಪಾದಕ ಗುಂಪು ಎಂದು ಕೆನಡಾ ಗುರುತಿಸಿದೆ. ಕೊಲೆ, ಭಯೋತ್ಪಾದನೆಯಲ್ಲಿ ಈ ಗ್ಯಾಂಗ್ ತೊಡಗಿಕೊಂಡಿದ್ದು, ಅದರ ಚಟುವಟಿಕೆಗಳು ಭಯ ಮತ್ತು ಬೆದರಿಕೆಯ ವಾತಾವರಣವನ್ನು ಸೃಷ್ಟಿಸುತ್ತಿವೆ ಎಂದು ಹೇಳಿದೆ. ಈ ಬಗ್ಗೆ ಸಚಿವ ಗ್ಯಾರಿ ಆನಂದಸಂಗರಿ ಮಾಹಿತಿ ನೀಡಿದ್ದಾರೆ.

Rajendra Singh Babu: ನಿರ್ದೇಶಕ ರಾಜೇಂದ್ರ ಸಿಂಗ್ ಬಾಬುಗೆ 4.37 ಲಕ್ಷ ವಂಚನೆ; ಡಬ್ಬಿಂಗ್‌ ನೆಪದಲ್ಲಿ ಖಾತೆಯಿಂದ ಹಣ ದೋಚಿದ ಸೈಬರ್‌ ಕಳ್ಳರು

ರಾಜೇಂದ್ರ ಸಿಂಗ್ ಬಾಬು ಖಾತೆಯಿಂದ 4.37 ಲಕ್ಷ ದೋಚಿದ ಸೈಬರ್ ವಂಚಕರು

Cyber Crime: 'ರಕ್ತ ಕಾಶ್ಮೀರ' ಸಿನಿಮಾ ಡಬ್ಬಿಂಗ್ ನೆಪದಲ್ಲಿ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಆಧಾ‌ರ್ ಸಂಖ್ಯೆ, ಪಾನ್‌ ಕಾರ್ಡ್ ವಿವರವನ್ನು ಪಡೆದ ಸೈಬರ್ ವಂಚಕರು, ಖಾತೆಯಿಂದ ಲಕ್ಷ ಲಕ್ಷ ಹಣ ದೋಚಿದ್ದಾರೆ. ಈ ಬಗ್ಗೆ ಯಶವಂತಪುರ ಪೊಲೀಸ್‌ ಠಾಣೆಗೆ ದೂರು ನೀಡಲಾಗಿದೆ.

I Love Muhammad: ಮಹಾರಾಷ್ಟ್ರದಲ್ಲೂ ಭುಗಿಲೆದ್ದ 'ಐ ಲವ್ ಮುಹಮ್ಮದ್' ವಿವಾದ; ಭಾರೀ ಘರ್ಷಣೆ- 30 ಜನರ ಬಂಧನ

I LOVE ಮುಹಮ್ಮದ್ ವಿವಾದಕ್ಕೆ ಕಾರಣಕರ್ತರು ಯಾರು ಗೊತ್ತಾ...?

ಉತ್ತರ ಪ್ರದೇಶದಲ್ಲಿ ಐ ಲವ್ ಮುಹಮ್ಮದ್ ವಿವಾದವು ಮತ್ತಷ್ಟು ಕಾವೇರಿದ್ದು, ಪರಿಸ್ಥಿತಿಯ ನಿಯಂತ್ರಣ ಕಳೆದುಕೊಂಡಿದೆ. ಬರೇಲಿಯಲ್ಲಿ ಇಸ್ಲಾಮಿಕ್ ಧರ್ಮಗುರು ಮೌಲಾನಾ ತೌಕೀರ್ ರಜಾ ‘ಐ ಲವ್ ಮುಹಮ್ಮದ್’ ಪೋಸ್ಟರ್‌ಗಳ ಬೆಂಬಲವಾಗಿ ಧರಣಿ ನಡೆಸುವುದಾಗಿ ಘೋಷಿಸಿದ್ದರು. ಆದರೆ, ಜಿಲ್ಲಾಡಳಿತದಿಂದ ಅನುಮತಿ ದೊರೆಯದ ಕಾರಣ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿತು. ಇದೀಗ ವಿಡಿಯೊ ಸೋಮವಾರ ಬೆಳಗ್ಗೆ ವೈರಲ್ ಆಗಿ, ಪ್ರತಿಭಟನೆಗೆ ಕಾರಣವಾಗಿದ್ದು, ಇದರಿಂದ ಉದ್ವಿಗ್ನತೆ ಹೆಚ್ಚಾಗಿ, ಹಿಂಸೆಗೆ ತಿರುಗಿತು.

Bike Accident: ತುಮಕೂರಿನಲ್ಲಿ ಭೀಕರ ಅಪಘಾತ; ಎರಡು ದ್ವಿಚಕ್ರ ವಾಹನ ಡಿಕ್ಕಿಯಾಗಿ ಮೂವರ ದುರ್ಮರಣ

ತುಮಕೂರಿನಲ್ಲಿ ಭೀಕರ ಅಪಘಾತ; 2 ದ್ವಿಚಕ್ರ ವಾಹನ ಡಿಕ್ಕಿಯಾಗಿ ಮೂವರ ಸಾವು

Tumkur News: ತುಮಕೂರು ಜಿಲ್ಲೆಯ ಶಿರಾ ಪಟ್ಟಣದ ಸಾಯಿ ಡಾಬಾ ಬಳಿ ಬೈಕ್ ಮತ್ತು ಆಕ್ಟಿವಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸವಾರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಸಂಬಂಧ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ತನಿಖೆ ಮುಂದುವರೆದಿದೆ.

Viral Video: ಹೋಂ ವರ್ಕ್‌ ಮಾಡದ್ದಕ್ಕೆ ಇದೆಂಥಾ ಶಿಕ್ಷೆ!? ಬಾಲಕನನ್ನು ತಲೆ ಕೆಳಗಾಗಿ ನೇತುಹಾಕಿ ಥಳಿಸಿದ ಶಿಕ್ಷಕಿ

ಬಾಲಕನನ್ನು ತಲೆ ಕೆಳಗಾಗಿ ನೇತು ಹಾಕಿ ಥಳಿಸಿದ ಶಿಕ್ಷಕಿ- ವಿಡಿಯೊ ನೋಡಿ

Student Punished Brutally: ಹರಿಯಾಣದ ಪಾಣಿಪತ್‌ನ ಖಾಸಗಿ ಶಾಲೆಯಲ್ಲಿ ನಡೆದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಕೊಟ್ಟ ಹೋಮ್‌ವರ್ಕ್‌ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿಯನ್ನು ಮೇಲೆ ಮನಬಂದಂತೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಯ ಕೈಕಾಲು ಕಟ್ಟಿ, ತಲೆಕೆಳಕೆ ಮಾಡಿ ಕಿಟಕಿಗೆ ನೇತುಹಾಕಿ ಥಳಿಸಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೊ ವೈರಲ್ ಆಗಿದ್ದು, ಘಟನೆ ಆಗಸ್ಟ್ ತಿಂಗಳಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

Smuggling: 2.5 ಕೋಟಿ ಮೌಲ್ಯದ ಹೆರಾಯಿನ್ ಕಳ್ಳಸಾಗಣೆ ಪತ್ತೆ- ಇಬ್ಬರು ಅರೆಸ್ಟ್‌

2.5 ಕೋಟಿ ಮೌಲ್ಯದ ಹೆರಾಯಿನ್ ಕಳ್ಳಸಾಗಣೆ ಪತ್ತೆ- ಇಬ್ಬರು ಅರೆಸ್ಟ್‌

ಮೇಘಾಲಯದ ವೆಸ್ಟ್ ಜೈಂತಿಯಾ ಹಿಲ್ಸ್‌ನಲ್ಲಿ ಸುಮಾರು 2.5 ಕೋಟಿ ರೂಪಾಯಿ ಮೌಲ್ಯದ 512.63 ಗ್ರಾಂ ಹೆರಾಯಿನ್‌ನೊಂದಿಗೆ ಇಬ್ಬರನ್ನು ಮಣಿಪುರ ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ ಮತ್ತೊಂದು ಘಟನೆಯಲ್ಲಿ ಪಂಜಾಬ್‌ನಲ್ಲಿ ಪಾಕಿಸ್ತಾನ ಮೂಲದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದ್ದು, ಸರಿಸುಮಾರು 4 ಕೆಜಿ ಹೆರಾಯಿನ್ ಜೊತೆ ಇಬ್ಬರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

Murder Case: ತನ್ನ ದ್ವೇಷಕ್ಕಾಗಿ ಮಗನ ಭವಿಷ್ಯವನ್ನೇ ಬಲಿ ಕೊಟ್ಟ ಪಾಪಿ ತಂದೆ! ಮನಕಲುಕುವ ಸ್ಟೋರಿ ಇಲ್ಲಿದೆ

ತನ್ನ ದ್ವೇಷಕ್ಕಾಗಿ ಮಗನ ಭವಿಷ್ಯವನ್ನೇ ಬಲಿ ಕೊಟ್ಟ ಪಾಪಿ ತಂದೆ!

ಒಂದು ದಿನ ಕಳೆಯುತ್ತಿದ್ದರೆ ಮಗನಿಗೆ 18 ವರ್ಷ ತುಂಬುತ್ತಿತ್ತು. ಆದರೆ ತಂದೆಯೊಬ್ಬ ತನ್ನ ದ್ವೇಷ ತೀರಿಸುವ ಸಲುವಾಗಿ ಆತನನ್ನು ಕೊಲೆಯಲ್ಲಿ ಭಾಗಿಯಾಗುವಂತೆ ಮಾಡಿ ಜೈಲು ಪಾಲು ಮಾಡಿದ್ದಾನೆ. ಈ ಘಟನೆ ಶುಕ್ರವಾರ ದೆಹಲಿಯಲ್ಲಿ ನಡೆದಿದೆ. ಬಾಲಾಪರಾಧಿ ಕಾನೂನು ತನ್ನ ಮಗನನ್ನು ರಕ್ಷಿಸುತ್ತದೆ ಎಂದು ಭಾವಿಸಿ ಆತ ರೀತಿ ಮಾಡಿದ್ದಾನೆ ಎನ್ನಲಾಗಿದೆ.

Drug Smuggling Case: ಬೆಂಗಳೂರಿನಲ್ಲಿ 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ಜಪ್ತಿ; ಏಳು ಆರೋಪಿಗಳು ಅರೆಸ್ಟ್‌

ಬೆಂಗಳೂರಿನಲ್ಲಿ 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳು ಜಪ್ತಿ

Bengaluru News: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳು ಸೇರಿ ಏಳು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ ಒಟ್ಟು 3.85 ಕೆಜಿ ಎಂಡಿಎಂಎ ಕ್ರಿಸ್ಟೆಲ್, 41 ಗ್ರಾಂ ಎಕ್ಸ್‌ಟಸಿ ಪಿಲ್ಸ್, 1.8 ಕೆಜಿ ಹೈಡ್ರೋಗಾಂಜಾ, 6 ಕೆಜಿ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗಿದ್ದ 1 ಕಾರು ಮತ್ತು 1 ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಆನೇಕಲ್‌ನಲ್ಲಿ ಅಮಾನವೀಯ ಕೃತ್ಯ; ವರದಕ್ಷಿಣೆಗಾಗಿ ಮಹಿಳೆಯ ಕೂದಲು ಹಿಡಿದು, ಒದ್ದು ಮನಸೋ ಇಚ್ಛೆ ಹಲ್ಲೆ!

ವರದಕ್ಷಿಣೆಗಾಗಿ ಪತ್ನಿ ಕೂದಲು ಹಿಡಿದು ಹಿಗ್ಗಾಮುಗ್ಗಾ ಹಲ್ಲೆ ಮಾಡಿದ ಪತಿ!

Assault Case: ವರದಕ್ಷಿಣೆಗಾಗಿ ಮಹಿಳೆಗೆ ಕಿರುಕುಳ ನೀಡಿರುವ ಗಂಡನ ಮನೆಯರು, ಆಕೆಯ ಕೂದಲು ಹಿಡಿದು ಎಳೆದಾಡಿ ಕಾಲಿನಿಂದ ಒದ್ದು ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಆನೇಕಲ್‌ನ ನಾರಾಯಣಪುರದಲ್ಲಿ ಈ ಘಟನೆ ನಡೆದಿದೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading...