Thursday, 28th March 2024

ಕೋವಿಡ್:  ಒಬ್ಬರು ಗುಣಮುಖ: ಆಸ್ಪತ್ರೆಯಿಂದ ಬಿಡುಗಡೆ

ಧಾರವಾಡ  :
ಕೋವಿಡ್ ನಿಂದ ಗುಣಮುಖರಾಗಿರುವ ಒಬ್ಬರನ್ನು  ಇಂದು  ಹುಬ್ಬಳ್ಳಿಯ ಕಿಮ್ಸ್ ನಿಂದ    ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ. ಮೇ 01 ರಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದ ಹುಬ್ಬಳ್ಳಿ ಕೇಶ್ವಾಪುರ ಶಾಂತಿನಗರದ  ಪಿ- 589 ( 57 ವರ್ಷ,ಪುರುಷ)   ಸಂಪೂರ್ಣ ಗುಣಮುಖರಾಗಿದ್ದಾರೆ.24 ಗಂಟೆಗಳ ಅಂತರದಲ್ಲಿ ಎರಡು ಬಾರಿ ಅವರ ಗಂಟಲು ದ್ರವ ಪರೀಕ್ಷೆ ಮಾಡಿದಾಗ ಕೋವಿಡ್ ನೆಗೆಟಿವ್ ವರದಿ ಬಂದಿದೆ. ಎಕ್ಸ್ ರೇ ಮೂಲಕ  ಪರೀಕ್ಷೆ ಮಾಡಿ ಶ್ವಾಸಕೋಶದ ತೊಂದರೆ ಇಲ್ಲ ಎಂಬುದನ್ನು ವೈದ್ಯರು ದೃಢಪಡಿಸಿದ್ದರಿಂದ ಇವರನ್ನು ಆಸ್ಪತ್ರೆಯಿಂದ  ಬಿಡುಗಡೆ ಮಾಡಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 10 ಜನ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾಡಳಿತ ಮತ್ತು ಕಿಮ್ಸ್ ವೈದ್ಯರ ತಂಡಕ್ಕೆ ಕೃತಜ್ಞತೆ ಸಲ್ಲಿಸಿದ ಗುಣಮುಖ ಹೊಂದಿದ ವ್ಯಕ್ತಿ:ಕೋವಿಡ್ ದೃಢಪಟ್ಟ ನಂತರ ಇಂದಿನವರೆಗೆ ಮುನ್ನೆಚ್ಚರಿಕೆ ಮತ್ತು ಕಾಳಜಿ ಮನೋಭಾವದೊಂದಿಗೆ ವರ್ತಿಸಿದ ಜಿಲ್ಲಾಡಳಿತ ಹಾಗೂ ಕಿಮ್ಸ್ ವೈದ್ಯರು ,ನರ್ಸ್ ಹಾಗೂ ಅರೆವೈದ್ಯಕೀಯ ಸಿಬ್ಬಂದಿಗೆ ಪಿ-589 ಕೃತಜ್ಞತೆ ಸಲ್ಲಿಸಿದರು.ಕಿಮ್ಸ್ ಸಿಬ್ಬಂದಿ ಚಪ್ಪಾಳೆ ತಟ್ಟಿ ಬೀಳ್ಕೊಟ್ಟರು. ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ, ವೈದ್ಯಕೀಯ ಅಧೀಕ್ಷಕ ಡಾ.ಅರುಣಕುಮಾರ್ ಚವ್ಹಾಣ,ಉಪವೈದ್ಯಕೀಯ ಅಧೀಕ್ಷಕ ಡಾ.ರಾಜಶೇಖರ ದ್ಯಾಬೇರಿ, ಸೂಕ್ಷ್ಮಾಣುಜೀವಶಾಸ್ತ್ರ ವಿಭಾಗದ ಡಾ.ಮಹೇಶ, ವಾರ್ಡಿನ ನರ್ಸ್ ಎನಾಪಾಲ್ ಮತ್ತಿತರರು ಇದ್ದರು.

Leave a Reply

Your email address will not be published. Required fields are marked *

error: Content is protected !!