Thursday, 28th March 2024

ಮುಂಬೈನಿಂದ ಆಗಮಿಸಿದ್ದ ಯುವಕನಿಗೆ ಕೋವಿಡ್-19

ಮಡಿಕೇರಿ
ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ 26 ವರ್ಷದ ವ್ಯಕ್ತಿಗೆ ಕೋವಿಡ್ -19 ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
    ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಕಂಡುಬಂದ ಮೂರನೇ ಕೋವಿಡ್ -19 ಪ್ರಕರಣವಾಗಿದೆ ಎಂದು ತಿಳಿಸಿದರು. ಪೇಶಂಟ್ ಸಂಖ್ಯೆ 2003 ಆಗಿರುವ ಈ ವ್ಯಕ್ತಿಯು ಮುಂಬೈನಲ್ಲಿ ಬ್ಯಾಂಕ್ ಉದ್ಯೋಗಿಯಾಗಿದ್ದು, ಮೇ  20 ರಂದು ಇತರೆ ಮೂರು ಅಂತರ ರಾಜ್ಯ ಸಹೋದ್ಯೋಗಿಗಳೊಂದಿಗೆ ಕೊಡಗು ಜಿಲ್ಲೆಯ ಸಂಪಾಜೆ ಚೆಕ್ ಪೆÇಸ್ಟ್‍ಗೆ ಆಗಮಿಸಿದ್ದಾರೆ. ಇವರುಗಳು ಸಂಪಾಜೆ ಚೆಕ್ ಪೆÇಸ್ಟ್‍ಗೆ ತಲುಪಿದ ನಂತರ ನೇರವಾಗಿ ಮಡಿಕೇರಿಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
    ಕೋವಿಡ್ -19 ಸೋಂಕು ದೃಡಪಟ್ಟಿರುವ ವ್ಯಕ್ತಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಚಿಕಿತ್ಸೆ ಪ್ರಗತಿಯಲ್ಲಿದೆ. ಈ ವ್ಯಕ್ತಿಯು ಜಿಲ್ಲೆಯ ಯಾವುದೇ ವ್ಯಕ್ತಿಗಳೊಂದಿಗೆ  ಸಂಪರ್ಕಕ್ಕೆ ಬಂದಿರದ ಕಾರಣ ಹಾಗೂ ಯಾವುದೇ ಸ್ಥಳಕ್ಕೆ ಭೇಟಿ ನೀಡದ ಕಾರಣ ಜಿಲ್ಲೆಯಲ್ಲಿ ಯಾವುದೇ ಭಾಗವನ್ನು ಕಂಟೈನ್‍ಮೆಂಟ್ ವಲಯ ಎಂದು ಘೋಷಿಸಿರುವುದಿಲ್ಲ. ಆದ್ದರಿಂದ ಜಿಲ್ಲೆಯ ಜನತೆ ಆತಂಕಕ್ಕೆ ಒಳಾಗಾಗಬಾರದು ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!