Saturday, 27th July 2024

ಎಸಿಬಿ ಬಲೆಗೆ ಹೆಸ್ಕಾಂನ ಸೆಕ್ಷನ್ ಅಧಿಕಾರಿಗಳು

ಬೆಳಗಾವಿ: ಜಮೀನಿನಲ್ಲಿದ್ದ ಟಿ.ಸಿ ಬದಲಿಸಿ ಹೊಸ ಟಿ.ಸಿ ಮಂಜೂರು ಮಾಡಿಕೊಡಲು 65 ಸಾವಿರ ರೂಪಾಯಿ ಲಂಚ ಪಡೆಯು ತ್ತಿದ್ದ ಹೆಸ್ಕಾಂನ ಇಬ್ಬರು ಸೆಕ್ಷನ್ ಅಧಿಕಾರಿಗಳು ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ. ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಹೆಸ್ಕಾಂ ಲೋಳುಸರ ಸೆಕ್ಷನ್ ಆಫೀಸರ್ ಪ್ರಕಾಶ್ ವಿರೂಪಾಕ್ಷ ಪರೀಟ್ ಮತ್ತು ಮೇಲ್ವಿಚಾರಕ ಮಲ್ಲಯ್ಯ ಕುಮಾರಸ್ವಾಮಿ ಹಿರೇಮಠ ಬಂಧಿತ ಅಧಿಕಾರಿಗಳು. ಜಿಲ್ಲೆಯ ಮೂಡಲಗಿ ತಾಲೂಕಿನ ಅರಂಭಾವಿ ಗ್ರಾಮದ ನಿವಾಸಿ ಆನಂದ ಉದ್ದಪ್ಪ ತಮ್ಮ ಜಮೀನಿನಲ್ಲಿರುವ ಟಿ.ಸಿಗೆ ವಿದ್ಯುತ್ ಲೀಡ್ ಹೆಚ್ಚಾಗಿ ಹಾಳಾಗುತ್ತಿರುವುದರಿಂದ ಹೊಸ ಟಿ.ಸಿ ಹಾಕಿಕೊಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು.

ಇದಕ್ಕೆ ಅಧಿಕಾರಿಗಳಿಬ್ಬರೂ 65 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಆನಂದ ಅವರು ಎಸಿಬಿಗೆ ದೂರು ನೀಡಿದ್ದರು. ಅಧಿಕಾರಿಗಳಿಬ್ಬರೂ 65 ಸಾವಿರ ರೂ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆಯೇ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ ಉತ್ತರ ವಲಯದ ಎಸಿಬಿ ಪೊಲೀಸ್ ಅಧೀಕ್ಷಕ ಬಿ.ಎಸ್.ನೇಮಗೌಡ ಅವರ ಮಾರ್ಗದಶನದಲ್ಲಿ ಈ ದಾಳಿ ನಡೆದಿದೆ.

Leave a Reply

Your email address will not be published. Required fields are marked *

error: Content is protected !!