ಕಲಬುರಗಿ : ಮಹಾರಾಷ್ಟ್ರದ ಡ್ಯಾಂಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡುವ ಸಾಧ್ಯತೆಯಿರುವುದರಿಂದ
ಜಿಲ್ಲೆಯ ಭೀಮಾನದಿ ಪಾತ್ರದ 148 ಗ್ರಾಮಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.
7,50,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ ಇದ್ದು, ಜೇವರ್ಗಿ, ಚಿತ್ತಾಪುರ,ಅಫ್ಜಲ್ ಪುರ ಹಾಗೂ ಸೇಡಂ ತಾಲ್ಲೂಕುಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭೀಮಾ ನದಿತೀರದ ಹಾಗೂ ಹಿನ್ನೀರಿನ ಜನತೆ ಸುರಕ್ಷಿತವಾಗಿರುವ ಎತ್ತರದ ಪ್ರದೇಶಕ್ಕೆ ತೆರಳಲು ಸಲಹೆ ನೀಡಲಾಗಿದೆ.
ಒಟ್ಟು 148 ಗ್ರಾಮಗಳ ಸ್ಥಳಾಂತರಕ್ಕೆ ಎಂದು ಕಲಬುರಗಿ ಜಿಲ್ಲಾಧಿಕಾರಿ ವಿ.ವಿ. ಜೋತ್ಸ್ಬಾ ಆದೇಶ ಹೊರಡಿಸಿದ್ದಾರೆ.