Saturday, 27th July 2024

24 ಗಂಟೆಯೊಳಗೆ ಆರೋಪಿಗಳ ಬಂಧನ : ಸಿಎಂ ಬಿಎಎಸ್‌ವೈ

ಬೆಂಗಳೂರು: ಕೊಲೆಯಾಗಿರುವ ಬಿಬಿಎಂಪಿ ಮಾಜಿ ಸದಸ್ಯ ರೇಖಾ ಕದಿರೇಶ್ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸ ಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಹೇಳಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್‍ಪಂಥ್ ಅವರಿಂದ ಮಾಹಿತಿ ಪಡೆದಿದ್ದೇನೆ. 24 ಗಂಟೆಯೊಳಗೆ ಬಂಧಿಸಲು ಸೂಚಿಸಿದ್ದೇನೆ ಎಂದು ತಿಳಿಸಿದರು.

ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬುದು ಖಚಿತಪಟ್ಟಿಲ್ಲ. ಹಳೆ ದ್ವೇಷವೋ ಅಥವಾ ರಾಜಕೀಯ ವೈಷಮ್ಯವೋ ಎಂಬುದು ತನಿಖೆಯಿಂದ ಸಾಬೀತಾಗಲಿದೆ. ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಆಯುಕ್ತರಿಗೆ ಸೂಚಿಸಿ ದ್ದೇನೆ. ಈಗಾಗಲೇ ಆಯುಕ್ತರು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯೋನ್ಮುಖ ರಾಗಿದ್ದಾರೆ ಎಂದು ಹೇಳಿದರು.

ಈ ಹಿಂದೆ ಅವರ ಪತಿಯನ್ನು ಸಹ ಹತ್ಯೆ ಮಾಡಲಾಗಿತ್ತು. ಏನೆಲ್ಲ ಬಿಗಿ ಕ್ರಮಗಳನ್ನು ತೆಗೆದುಕೊಳ್ಳಬೇಕೋ ಅದನ್ನು ತೆಗೆದು ಕೊಳ್ಳುತ್ತೇವೆ. ನಗರದ ಜನತೆ ಆತಂಕಕ್ಕೆ ಒಳಗಾಗಬಾರದೆಂದು ಸಿಎಂ ಮನವಿ ಮಾಡಿದರು.

Leave a Reply

Your email address will not be published. Required fields are marked *

error: Content is protected !!