Wednesday, 24th April 2024

ಹುಟ್ಟುಹಬ್ಬದ ಸಂಭ್ರಮದಲ್ಲಿ ಮುಖ್ಯಮಂತ್ರಿ ಬಿಎಸ್‌’ವೈ, ಕೇಂದ್ರ ನಾಯಕರಿಂದ ಶುಭಾಶಯದ ಮಹಾಪೂರ

ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶನಿವಾರ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭ ದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಸೇರಿದಂತೆ ಹಲವು ಗಣ್ಯರು ಶುಭ ಹಾರೈಸಿದ್ದಾರೆ.

ಶುಭಾಶಯ ಕೋರಿ ಪಿಎಂ ನರೇಂದ್ರ ಮೋದಿ ಟ್ವೀಟ್ ಮಾಡಿದ್ದು, ‘ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಜನ್ಮದಿನದ ಶುಭಾಶಯಗಳು. ನಮ್ಮ ಅತ್ಯಂತ ಅನುಭವಿ ನಾಯಕರಲ್ಲಿ ಒಬ್ಬರು. ರೈತರ ಕಲ್ಯಾಣ ಮತ್ತು ಬಡವರ ಸಬಲೀಕರಣ ಕ್ಕಾಗಿ ತಮ್ಮ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರಿಗೆ ದೀರ್ಘಾಯಸ್ಸು ಮತ್ತು ಆರೋಗ್ಯಯುತ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದಿದ್ದಾರೆ.

ಸಚಿವ ಅಮಿತ್ ಶಾ ಅವರು ಟ್ವಿಟ್ ಮಾಡಿ, ಬಿ ಎಸ್ ಯಡಿಯೂರಪ್ಪ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ದೇವರು ಅವರಿಗೆ ಸುದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ ಎಂದು ಹಾರೈಸಿದ್ದಾರೆ.

‘ಕರ್ನಾಟಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಅವರ ಜನ್ಮದಿನದಂದು ಶುಭಾಶಯ ತಿಳಿಸುತ್ತೇನೆ. ಬಡವರನ್ನು ಮೇಲೆತ್ತುವ ಹಾಗೂ ರೈತರ ಸಬಲೀಕರಣದಲ್ಲಿ ಅವರು ಅವಿರತ ಕೆಲಸ ಮಾಡುತ್ತಿದ್ದಾರೆ. ಅವರ ಸುದೀರ್ಘ ಮತ್ತು ಆರೋಗ್ಯ ಯುತ ಜೀವನಕ್ಕಾಗಿ ಪ್ರಾರ್ಥಿಸುತ್ತೇನೆ’ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಶುಭ ಕೋರಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಟ್ವೀಟ್ ಮಾಡಿ, ಶ್ರಮಜೀವಿ ಕರ್ನಾಟಕ ಸಿಎಂ ಯಡಿಯೂರಪ್ಪನವರಿಗೆ ಜನ್ಮದಿನದ ಶುಭಾಶಯಗಳು. ಅವರ ನಾಯಕತ್ವದಲ್ಲಿ, ಕರ್ನಾಟಕ ಅಭಿವೃದ್ಧಿಯ ಹೊಸ ಎತ್ತರಗಳನ್ನು ಸಾಧಿಸುತ್ತಿದೆ ಮತ್ತು ಸ್ವಾವಲಂಬಿ ಭಾರತದ ಕಡೆಗೆ ಸಕ್ರಿಯ ಪಾತ್ರ ವಹಿಸುತ್ತಿದೆ ಎಂದರು.

ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ದೇವರು ನಿಮಗೆ ಆಯುರಾರೋಗ್ಯ ಕರುಣಿಸಿ ಜನಸೇವೆ ಮಾಡಲು ಇನ್ನೂ ಹೆಚ್ಚಿನ ಶಕ್ತಿ ನೀಡಲಿ ಎಂದು ಹಾರೈಸುತ್ತೇನೆ ಎಂದು ಶುಭ ಹಾರೈಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!