ಬೆಂಗಳೂರು : ಭಾರೀ ಸದ್ದು ಮಾಡಿದ್ದ ಸಿಡಿ ಪ್ರಕರಣ ಸಂಬಂಧ ಸಿಡಿ ಲೇಡಿ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ನೀಡಿದ್ದ ದೂರನ್ನು ಎಸ್ ಐಟಿಗೆ ವರ್ಗಾವಣೆ ಆಗಿದೆ.
ಪ್ರಕರಣ ಸಂಬಂಧ ಯುವತಿ ವಕೀಲ ಜಗದೀಶ್ ಮುಖಾಂತರ ಮಾ.26 ರಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಲಿಖಿತ ದೂರು ನೀಡಿದ್ದರು. ಈ ದೂರನ್ನು ಇದೀಗ ಎಸ್ ಐಟಿಗೆ ವರ್ಗಾಯಿಸಿದ್ದು, ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಕವಿತಾ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸಿಡಿ ಲೇಡಿ ನೀಡಿದ ದೂರನ್ನು ಎಸ್ ಐಟಿಗೆ ವರ್ಗಾಯಿಸ ಲಾಗಿದ್ದು, ಪ್ರಕರಣದ ತನಿಖಾಧಿಕಾರಿಯಾಗಿ ಎಸಿಪಿ ಕವಿತಾ ಅವರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ