ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 78ನೇ ಜನ್ಮದಿನದ ಅಂಗವಾಗಿ ಬೆಂಗಳೂರಿನ ಸಂಜಯ ನಗರದಲ್ಲಿರುವ ರಾಧಾಕೃಷ್ಣ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಯಡಿಯೂರಪ್ಪನವರು ನಾಡಿನ ಒಳಿತು, ರೈತರ ಬದುಕು ಹಸನಾಗಲಿ ಎಂದು ದೇವರಲ್ಲಿ ಭಕ್ತಿ ಪೂರಕವಾಗಿ ಪ್ರಾಥನೆ ಸಲ್ಲಿಸಿ ದರು. ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ, ವಸತಿ ಸಚಿವ ವಿ.ಸೋಮಣ್ಣ, ಬಿಡಿಎ ಅಧ್ಯಕ್ಷ ಎಸ್ ಅರ್ ವಿಶ್ವನಾಥ, ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.