ಬೆಂಗಳೂರು: ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನಾರಂಭಕ್ಕೆ ಸಂಬಂಧಿಸಿ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನವೆಂಬರ್17ರಿಂದ ಯುಜಿಸಿ ಮಾರ್ಗಸೂಚಿಯ ಅನುಸಾರ ಕಾಲೇಜು ಪ್ರಾರಂಭವಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ. ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.
ಮೊದಲಿಗೆ ಪದವಿ, ಡಿಪ್ಲೋಮಾ, ಎಂಜಿನಿಯರಿಂಗ್ ಕಾಲೇಜು ಪ್ರಾರಂಭಿಸಲಾಗುತ್ತದೆ. ವಿದ್ಯಾರ್ಥಿಗಳು ತರಗತಿಗೆ ಹಾಜರಾಗಿಯೂ ಕಲಿಯಬಹುದು ಇಲ್ಲವೇ ಆನ್ ಲೈನ್ ತರಗತಿಗೂ ಹಾಜರಾಗಬಹುದು. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ತರಗತಿಗಳಲ್ಲಿ ಎಲ್ಲಾ ಬಗೆಯ ಸುರಕ್ಷಿತಾ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಹೇಳಿದ್ದಾರೆ.