Monday, 20th May 2024

ಸ್ಫೋಟಕ ಕಾಯ್ದೆಯಡಿ ಕಾರ್ಖಾನೆ ಮಾಲೀಕರ ವಿರುದ್ಧ ದೂರು ದಾಖಲು

ಬೆಂಗಳೂರು: ಬೆಂಗಳೂರಿನ ಹೊಸಗುಡ್ಡದ ಹಳ್ಳಿಯಲ್ಲಿರುವ ರಾಸಾಯನಿಕ ಕಾರ್ಖಾನೆಯ ಗೋದಾಮಿನಲ್ಲಿ ಕಳೆದ ಮಂಗಳ ವಾರ ಸಂಭವಿಸಿದ ಅಗ್ನಿ ಅವಘಡಕ್ಕೆ ಸಂಬಂಧಿಸಿದಂತೆ ಸ್ಫೋಟಕ ಕಾಯ್ದೆಯಡಿ ಕಾರ್ಖಾನೆ ಮಾಲೀಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.

ಗೋದಾಮಿನಲ್ಲಿ ಸಣ್ಣದಾಗಿ ಕಾಣಿಸಿಕೊಂಡ ಬೆಂಕಿ ನಂತರ ಬೃಹತ್ ಪ್ರಮಾಣದಲ್ಲಿ ಹರಡಿಕೊಂಡಿತ್ತು. ಕ್ಷಣ ಮಾತ್ರದಲ್ಲಿ ಇಡೀ ಕಾರ್ಖಾನೆಯೊಂದಿಗೆ ಅಕ್ಕಪಕ್ಕದ ಮನೆಗಳಿಗೂ ಬೆಂಕಿ ವ್ಯಾಪಿಸಿದ್ದು, ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ನಿರತ ರಾಗಿದ್ದರು. ಸುಮಾರು ಹತ್ತು ಅಗ್ನಿಶಾಮಕ ದಳ ವಾಹನಗಳು ಬೆಂಕಿ ನಂದಿಸಲು ದೌಡಾಯಿಸಿದ್ದವು.

ಗೋದಾಮಿನ ಸುತ್ತಲಿನ ಮನೆಗಳಲ್ಲಿದ್ದ ಜನರನ್ನು ಸ್ಥಳಾಂತರಿಸಲಾಗಿತ್ತು. ಕಾಖಾನೆಯಲ್ಲಿದ್ದ ನಾಲ್ವರು ಹೊರಗೆ ಓಡಿಬಂದಿದ್ದು, ಒಬ್ಬನಿಗೆ ಗಾಯವಾಗಿ ಆತ ಚಿಕಿತ್ಸೆ ಪಡೆಯುತ್ತಿದ್ದಾನೆ. ಘಟನೆಯಲ್ಲಿ ಫ್ಯಾಕ್ಟರಿ ಸಮೀಪ ನಿಲ್ಲಿಸಿದ್ದ ಏಳು ವಾಹನಗಳು, 2 ವಿದ್ಯುತ್ ಕಂಬಗಳು ಸಂಪೂರ್ಣ ನಾಶವಾಗಿವೆ. ಗೋದಾಮಿನಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳದೇ ಸ್ಯಾನಿಟೈಸರ್, ಟಿನ್ನರ್ ನಂಥ ರಾಸಾಯನಿಕವನ್ನು ಸಂಗ್ರಹಿಸಿಟ್ಟಿದ್ದು, ಆ ಡಬ್ಬಗಳು ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿರುವುದಾಗಿ ತಿಳಿದು ಬಂದಿದೆ. ಘಟನೆಯಲ್ಲಿ 2 ರಿಂದ 3 ಕೋಟಿ ರೂಪಾಯಿ ನಷ್ಟ ಸಂಭವಿಸಿರುವುದಾಗಿ ಅಂದಾಜಿಸಲಾಗಿದೆ.

ಕಾರ್ಖಾನೆ ನಡೆಸುತ್ತಿದ್ದ ಕಮಲಾ ಮತ್ತು ಪತಿ ಸಜ್ಜನ್ ರಾಜ್ ವಿರುದ್ಧ ಸ್ಫೋಟಕ ಕಾಯ್ದೆ ಅಡಿ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

 

Leave a Reply

Your email address will not be published. Required fields are marked *

error: Content is protected !!