Wednesday, 24th April 2024

ಕರೋನಾ ಕಂಟಕ: ಮದ್ಯದಂಗಡಿ ಬಂದ್‌, ಸಿನಿಮಾ ಚಿತ್ರೀಕರಣ ಸ್ಥಗಿತ ?

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪರಿಸ್ಥಿತಿ ಬಂದಿದೆ, ಕಠಿಣ ಕ್ರಮ ಅನಿವಾರ್ಯ ಎಂದು ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

ಐಸಿಯು, ಆಕ್ಸಿಜನ್ ಬೆಡ್ ಕೊರತೆ ಕಂಡು ಬಂದಿದೆ. ಸೋಮವಾರ ಮಹತ್ವದ ಸಭೆ ನಡೆಯಲಿದ್ದು, ಕಠಿಣ ನಿಯಮ ಜಾರಿಗೆ ತರುವ ಸಾಧ್ಯತೆ ಇದೆ. ಲಾಕ್ಡೌನ್ ಹೊರತಾಗಿ ಆರ್ಥಿಕತೆ ದೃಷ್ಟಿಯಲ್ಲಿಟ್ಟುಕೊಂಡು ಕಠಿಣ ನಿಯಮ ರೂಪಿಸಲಾಗುತ್ತದೆ ಎಂದು ಹೇಳಲಾಗಿದ್ದು, ಜನ ಸೇರುವ ಸ್ಥಳಗಳಲ್ಲಿ ನಿರ್ಬಂಧ ಹೇರಲಿದ್ದು, ಮದ್ಯದಂಗಡಿ ಬಂದ್ ಮಾಡುವ ಸಾಧ್ಯತೆ ಇದೆ.

ಸಿನಿಮಾ ಹಾಲ್, ಚಿತ್ರೀಕರಣವನ್ನು ಕೂಡ ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಕರೋನಾ ಸರಪಳಿ ತುಂಡರಿಸಲು ಬೆಂಗಳೂರು ಸೇರಿದಂತೆ ಸೋಂಕು ಹೆಚ್ಚಾಗಿರುವ ಪ್ರದೇಶಗಳಲ್ಲಿ ಕಠಿಣ ನಿರ್ಬಂಧ ಜಾರಿಗೊಳಿಸುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!