Sunday, 19th May 2024

ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ವಿಚಾರಿಸಿದ ಡಿಸಿಎಂ ಡಾ.ಸಿಎನ್ ಅಶ್ವತ್ಥ ನಾರಾಯಣ, ನಟ ಜಗ್ಗೇಶ್

ಬೆಂಗಳೂರು : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಾಳಾಗಿ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ಕುರಿತಂತೆ, ಡಿಸಿಎಂ ಡಾ.ಸಿಎನ್ ಅಶ್ವತ್ಥ ನಾರಾಯಣ, ನಟ ಜಗ್ಗೇಶ್ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದರು.

ಶನಿವಾರ ರಾತ್ರಿ ಬೈಕ್ ನಲ್ಲಿ ಸ್ಕಿಡ್ ಆಗಿ ಬಿದ್ದು, ತಲೆಗೆ ಗಂಭೀವಾಗಿ ಗಾಯ ಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ನಟ ಸಂಚಾರಿ ವಿಜಯ್ ಅವರ ಆರೋಗ್ಯಸ್ಥಿತಿ ಗಂಭೀರಗೊಂಡಿತ್ತು. ಇಂತಹ ಅವರ ಚಿಕಿತ್ಸಾ ವೆಚ್ಚವನ್ನು ಡಿಸಿಎಂ ಡಾ.ಸಿಎನ್ ಅಶ್ವತ್ಥ ನಾರಾಯಣ, ತಮ್ಮ ಟ್ರಸ್ಟ್ ಮೂಲಕ ಭರಿಸುವುದಾಗಿ ತಿಳಿಸಿದ ಕಾರಣ, ಕುಟುಂಬಸ್ಥರು ಕಟ್ಟಿದ್ದ ಹಣವನ್ನು ಆಸ್ಪತ್ರೆ ವಾಪಾಸ್ ಮರಳಿಸಿತ್ತು.

 

Leave a Reply

Your email address will not be published. Required fields are marked *

error: Content is protected !!