Sunday, 28th April 2024

ಬಿಸಿಯೂಟ ಕಾರ್ಯಕರ್ತೆಯರ ಧರಣಿ ವಾಪಸ್‌

ಬೆಂಗಳೂರು : ಬಿಸಿಯೂಟ ಕಾರ್ಯಕರ್ತೆಯರ ಧರಣಿಗೆ ಕೊನೆಗೂ ಸರ್ಕಾರ ಮಣಿದಿದ್ದು, ಅಹೋರಾತ್ರಿ ಧರಣಿಯನ್ನ ಬಿಸಿಯೂಟ ಕಾರ್ಯಕರ್ತೆಯರು ಹಿಂಪಡೆದಿದ್ದಾರೆ.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌ ಬಿಸಿಯೂಟ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿಯನ್ನ ಬಿಸಿಯೂಟ ಕಾರ್ಯಕರ್ತೆಯರು ವಾಪಸ್‌ ಪಡೆದಿದ್ದಾರೆ.

ಬೆಂಗಳೂರಿನ ಫ್ರೀಡಂಪಾರ್ಕ್‌ನಲ್ಲಿ ಬಿಸಿಯೂಟ ಕಾರ್ಯಕರ್ತೆ ಯರು ಹಲವು ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿದ್ದರು. 

error: Content is protected !!