ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ವ್ಯಾಪ್ತಿಯ ರಾಜರಾಜೇಶ್ವರಿ ನಗರ ಅಸೆಂಬ್ಲಿ ಕ್ಷೇತ್ರದ ಉಪಚುನಾ ವಣೆಯ ಮತ ಎಣಿಕೆ ಆರಂಭವಾಗಿದೆ.
ಮೂರು ಸುತ್ತಿನ ಮತ ಎಣಿಕೆ ಮುಗಿದಿದ್ದು, ಆರಂಭಿಕ ಫಲಿತಾಂಶದ ಪ್ರಕಾರ ಬಿಜೆಪಿ ಅಭ್ಯರ್ಥಿ ಮುನಿರತ್ನ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಮುನಿರತ್ನ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಎಚ್.ಕುಸುಮಾ ಅವರಿಗಿಂತ ಮುನ್ನಡೆಯಲ್ಲಿದ್ದಾರೆ.
ಈ ಕ್ಷೇತ್ರದಲ್ಲಿ ಸೋಲಿನ ಸುಳಿವನ್ನು ಮೊದಲೇ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ನಾವು ಜಯದ ಸನಿಹಕ್ಕೆ ಬರುತ್ತೇವೆ ಎಂದು ಹೇಳಿದ್ದರು.
ಜೆಡಿಎಸ್ ಅಭ್ಯರ್ಥಿಗೆ ಬಂದಿದ್ದು ಕೇವಲ 2,500 ಮತಗಳು. ಇದುವರೆಗಿನ ಫಲಿತಾಂಶದ ಪ್ರಕಾರ, ಮುನಿರತ್ನ 6,418 ಮತಗಳಿಂದ ಮುನ್ನಡೆಯಲ್ಲಿದ್ದಾರೆ.
ಮೂರು ಸುತ್ತಿನ ಮತ ಎಣಿಕೆಯ ನಂತರ ಪಕ್ಷಕ್ಕೆ ಬಂದ ಮತಗಳು ಹೀಗಿವೆ:
ಮುನಿರತ್ನ (ಬಿಜೆಪಿ) – 15, 110
ಎಚ್. ಕುಸುಮಾ (ಕಾಂಗ್ರೆಸ್) – 8, 692
ಕೃಷ್ಣಮೂರ್ತಿ (ಜೆಡಿಎಸ್) – 2,500