Saturday, 27th July 2024

ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರು ಉಪಮುಖ್ಯಮಂತ್ರಿಗಳು

ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾದ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಮೂವರನ್ನು ಉಪಮುಖ್ಯಮಂತ್ರಿ ಗಳಾಗಿ ಆಯ್ಕೆ ಮಾಡಲಾಗಿದೆ.

ಶ್ರೀರಾಮುಲು, ಗೋವಿಂದ ಕಾರಜೋಳ ಹಾಗೂ ಆರ್​.ಅಶೋಕ್​ ಅವರನ್ನು ಉಪಮುಖ್ಯಮಂತ್ರಿಗಳಾಗಿ ಘೋಷಿಸಲಾಗಿದೆ. ಅಶ್ವಥ್ ನಾರಾಯಣ್ ಮತ್ತು ಲಕ್ಷ್ಮಣ್ ಸವದಿಯನ್ನು ಸ್ಥಾನದಿಂದ ಕೈ ಬಿಡಲಾಗಿದೆ. ಉಪ ಮುಖ್ಯಮಂತ್ರಿ ವಿಚಾರದಲ್ಲಿ ಒಕ್ಕಲಿಗ, ವಾಲ್ಮೀಕಿ ಹಾಗೂ ದಲಿತ ಸಮುದಾಯಕ್ಕೆ ಆದ್ಯತೆ ನೀಡಲಾ ಗಿದೆ.

ಆರ್​.ಅಶೋಕ್ ಹಾಗೂ ಶ್ರೀರಾಮುಲು ಅವರು ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದು, ಇದೀಗ ಡಿಸಿಎಂಗಳಾಗಿ ಆಯ್ಕೆ ಮಾಡಲಾಗಿದೆ. ಬಿಎಸ್​ವೈ ಸಂಪುಟದಲ್ಲಿ ಡಿಸಿಎಂ ಆಗಿದ್ದ ಗೋವಿಂದ ಕಾರಜೋಳ ತಮ್ಮ ಸ್ಥಾನವನ್ನು ಉಳಿಸಿಕೊಂಡು ಅಧಿಕಾರ ಮುನ್ನೆಡಸಲಿದ್ದಾರೆ ಎಂದು ತಿಳಿಸಲಾಗಿದೆ.

Leave a Reply

Your email address will not be published. Required fields are marked *

error: Content is protected !!