ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಸಹಯೋಗದೊಂದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಕನ್ನಡ ಕಾಯಕ ವರ್ಷಾಚರಣೆಯ ಅಂಗವಾಗಿ ‘ಮಾಧ್ಯಮಗಳಲ್ಲಿ ಸರಿಗನ್ನಡ ಬಳಕೆ’ ಕುರಿತು ನಡೆಸುತ್ತಿರುವ ಅಭಿಯಾನಕ್ಕೆ ಮಾ.30 ರಂದು ಬೆಳಿಗ್ಗೆ 11ಕ್ಕೆ ಕೆಯುಡಬ್ಲ್ಯೂಜೆ (ಕಂದಾಯ ಭವನ 3ನೇ ಮಹಡಿ, ಕೆಜಿ ರೋಡ್) ಸಭಾಂಗಣದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಲಿದ್ದಾರೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮತ್ತು ಚಿತ್ರ ನಿರ್ದೇಶಕ ನಾಗಾಭರಣ ಈ ಸಂದರ್ಭದಲ್ಲಿ ನಮ್ಮೊಂದಿಗೆ ಇರಲಿದ್ದಾರೆ.