Sunday, 19th May 2024

ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ: ಈ ‘ವಿಐಪಿ’ಗಳಿಗೆ ದಂಡ

ಬೆಂಗಳೂರು: ಕೋವಿಡ್-19 ಮಾರ್ಗಸೂಚಿ ಉಲ್ಲಂಘನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ವಿಭಾಗೀಯ ಪೀಠದಲ್ಲಿ PIL ವಿಚಾರಣೆ ನಡೆಸಲಾಗಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ನಟ ದರ್ಶನ್ ಅವರಿಗೆ ತಲಾ 250 ರೂಪಾಯಿ ದಂಡ,  ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಂಸದ ಡಿ.ಕೆ. ಸುರೇಶ್ ಅವರಿಗೂ ದಂಡ ವಿಧಿಸಿರುವುದಾಗಿ ಪಿಐಎಲ್ ವಿಚಾರಣೆ ವೇಳೆಯಲ್ಲಿ ಹೈಕೋರ್ಟ್ ಗೆ ಸರ್ಕಾರದಿಂದ ಹೇಳಿಕೆ ನೀಡಲಾಗಿದೆ.

ಆರ್.ಆರ್. ನಗರ ಉಪ ಚುನಾವಣೆ ಪ್ರಚಾರದ ವೇಳೆ ಮಾರ್ಗಸೂಚಿ ಉಲ್ಲಂಘಿಸಲಾಗಿದೆ. ಬಿಜೆಪಿ ಯುವಮೋರ್ಚಾ ರ್ಯಾಲಿ ಆಯೋಜಕರ ಮೇಲೂ ಕೂಡಾ NDMA ಕಾಯ್ದೆಯಡಿ ಕೇಸು ದಾಖಲಿಸಿರುವುದಾಗಿ ಹೈಕೋರ್ಟ್ ಗೆ ಸರ್ಕಾರಿ ವಕೀಲ ವಿಕ್ರಂ ಹುಯಿಲಗೋಳ ಹೇಳಿಕೆ ನೀಡಿದ್ದಾರೆ.

 

Leave a Reply

Your email address will not be published. Required fields are marked *

error: Content is protected !!