Saturday, 27th July 2024

ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಪ್ರಕರಣ ಸಿಸಿಬಿಗೆ ಹಸ್ತಾಂತರ: ಕಮಿಷನರ್‌ ಪಂತ್‌

ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿರುವ ನಟಿ ರಾಗಿಣಿ ಹಾಗೂ ನಟಿ ಸಂಜನಾರನ್ನು ಬಿಡುಗಡೆ ಮಾಡದಿದ್ದರೆ ಬಾಂಬ್ ಹಾಕ್ತೀವಿ ಎಂದು ನ್ಯಾಯಾಧೀಶರಿಗೆ ಬೆದರಿಕೆ ಹಾಕಿದ್ದ ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಲಾಗಿದೆ ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹೇಳಿದ್ದಾರೆ.

ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಬೆದರಿಕೆ ಪ್ರಕರಣವನ್ನು ಹಲಸೂರು ಗೇಟ್ ಠಾಣೆಯಿಂದ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಕಳೆದ ಸೋಮವಾರ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಜೈಲಿನಲ್ಲಿರುವ ನಟಿಯರಿಗೆ ಜಾಮೀನು ನೀಡುವಂತೆ ಹಾಗೂ ಕೆಜಿ ಹಳ್ಳಿ ಡಿಜೆ ಹಳ್ಳಿ ಪ್ರಕರಣದಿಂದ ಹಿಂದೆ ಸರಿಯುವಂತೆ ಬೆದರಿಕೆ ಪತ್ರ ಬಂದಿತ್ತು.

Leave a Reply

Your email address will not be published. Required fields are marked *

error: Content is protected !!