ಪ್ರತಿಭಟನೆಗೆ ಸೀಮಿತ ರೈತಪರ ಬಂದ್
ಕೊಪ್ಪಳ: ಭಾರತ ಬಂದ್ ಹಿನ್ನಲೆಯಲ್ಲಿ ಕೊಪ್ಪಳದಲ್ಲಿ ಬೆಳಂಬೆಳಿಗ್ಗೆ ರೈತ ಸಂಘಟನೆಗಳು ಟೈರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ರೈತ ಸಂಘಟನೆಗಳು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿ ಸುತ್ತಿದ್ದರು. ಬೆಳಂಬೆಳಿಗ್ಗೆ ಪ್ರತಿಭಟನೆ ಕಾವು ಜೋರಾಗಿದ್ದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡ ಬಳಿಯ ಟೋಲ್ ಗೇಟ್ ಬಳಿ ರೈತ ಹಿತರಕ್ಷಣ ವೇದಿಕೆ ಪ್ರತಿಭಟನೆ ಕೈಗೊಂಡು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಟೈರ್ ಗೆ ಬೆಂಕಿ ಹಚ್ಚಿ ಟೋಲ್ಗೇಟ್ ಬಂದ್ ಮಾಡಿದರು.
ಅದರಂತೆ ಕೊಪ್ಪಳ ನಗರದಲ್ಲೂ ಕೂಡ ರೈತ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳು ಕೊಪ್ಪಳ ಕೇಂದ್ರ ಬಸ್ ನಿಲ್ದಾಣದ ಮುಂದೆ ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರಧಾನಿ ಮೋದಿ ಪ್ರತಿಕೃತಿ ಧಹಿಸಿ ಆಕ್ರೋಶ ವ್ತಕ್ತಪಡಿಸಿದರು.