ಬೀದರ್: ನಗರದಲ್ಲಿ ದಿಢೀರ್ ಲಾಕ್ಡೌನ್ಗೆ ಜಿಲ್ಲಾಡಳಿತ ಮುಂದಾಗಿದ್ದು, ವ್ಯಾಪಾರಿಗಳು, ಸಾರ್ವಜನಿಕರು ಆತಂಕಗೊಂಡಿ ದ್ದಾರೆ. ಪೊಲೀಸರು ಅಂಗಡಿಗಳನ್ನು ಮುಚ್ಚಿಸುತ್ತಿದ್ದು, ಜಿಲ್ಲಾಡಳಿತದ ವಿರುದ್ಧ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಆದೇಶದ ಅನ್ವಯ ರಾತ್ರಿ 9 ರಿಂದ ಬೆಳಗ್ಗೆ 6ರ ತನಕ ರಾತ್ರಿ ಕರ್ಫ್ಯೂ ಮತ್ತು ಶನಿವಾರ ಮತ್ತು ಭಾನುವಾರ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರ ಬೇಕು. ಆದರೆ, ಗುರುವಾರ ಪೊಲೀಸರು ವಾಹನಗಳಲ್ಲಿ ರಸ್ತೆಗಿಳಿದು ಅಂಗಡಿ ಗಳನ್ನು ಮುಚ್ಚಿಸಿ ದ್ದಾರೆ.
ದಿನಸಿ ಅಂಗಡಿಗಳು ಹೊರತುಪಡಿಸಿ ಎಲ್ಲಾ ಅಂಗಡಿಗಳಿಗೆ ಬೀಗ ಹಾಕುವಂತೆ ತಾಕೀತು ಮಾಡಿದ್ದಾರೆ. ನಗರದ ಅಂಬೇಡ್ಕರ್ ವೃತದಿಂದ ಗವಾನ್ ಚೌಕ್ವರೆ ಗಿನ ರಸ್ತೆ ಮಾರ್ಗದಲ್ಲಿದ್ದ ಅಂಗಡಿಗಳು ಕ್ಷಣಾರ್ಧದಲ್ಲಿ ಬಂದ್ ಮಾಡಲಾಗಿದೆ.
ಆದೇಶ ಪಾಲಿಸದೇ ಬೇರೆ ವಿಧಿಯಿಲ್ಲ ಎಂದು ವ್ಯಾಪಾರಿಗಳು ಅಳಲು ತೋಡಿ ಕೊಳ್ಳುತ್ತಿದ್ದಾರೆ. ಸಣ್ಣ-ಸಣ್ಣ ವ್ಯಾಪಾರಿಗಳು ಈಗಷ್ಟೇ ಅಂಗಡಿ ತೆರೆದಿದ್ದು, ದಿಢೀರನೇ ಬಂದ್ ಮಾಡುವಂತೆ ಸೂಚಿಸಿದರಿಂದ ದಿಕ್ಕು ತೋಚದಂತಾಗಿ ದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಒಟ್ಟು ಸೋಂಕಿತರ ಸಂಖ್ಯೆ 14,322ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 2,822.