ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ಬಳಿಕ ನಡೆದಿರುವ ಘಟನೆ ಯಲ್ಲ. ಮೂರ್ನಾಲ್ಕು ವರ್ಷಗಳ ಹಿಂದೆಯೇ ನಡೆದಿರುವ ಘಟನೆಯಾಗಿದ್ದು, ಈಗ ಹೆಚ್ಚು ಬೆಳಕಿಗೆ ಬಂದಿದೆ ಎಂದರು.
ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಈ ವಿಚಾರವನ್ನೇ ಪ್ರಮುಖವಾಗಿ ಪ್ರಸ್ತಾಪಿಸು ತ್ತಿವೆ. ಚುನಾವಣೆಗೆ ಒಂದು ವಿಚಾರ ಬೇಕಾಗಿದೆ. ಆ ಕಾರಣಕ್ಕಾಗಿ ಆರೋಪಗಳು ಕೇಳಿಬರುತ್ತಿವೆ ಎಂದು ಹೇಳಿದರು.
ವಿಚಾರಣೆ ನಡೆದರೆ ಯಾರು ತಪ್ಪು ಮಾಡಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ. ಸತ್ಯ ಏನು ಎಂಬುದು ಬಹಿರಂಗವಾಗಲಿದೆ ಎಂದು ತಿಳಿಸಿದರು.