Sunday, 24th September 2023

22 ಸಾವಿರ ಮಕ್ಕಳ ಪೈಕಿ ಬೆಂಗಳೂರಿನ ಇಬ್ಬರು ಮಾತ್ರ ಆಯ್ಕೆ

ಬೈಜೂಸ್ ಯಂಗ್ ಜೀನಿಯಸ್ ಸೀಸನ್-2 ಕಾರ್ಯಕ್ರಮದಲ್ಲಿ ಬೆಂಗಳೂರಿನ ಹುಡುಗ ರಾಹುಲ್ ವೆಲ್ಲಾಲ್” ಬಾಲಕಿ ಸಿರಿ ಗಿರೀಸ್” 

ಬೆಂಗಳೂರು: ಸಣ್ಣವಯಸ್ಸಿನಲ್ಲೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳನ್ನು ಗುರುತಿಸಿ ಪ್ರಶಂಸಿಸುವ “ಬೈಜೂಸ್ ಯಂಗ್ ಜೀನಿಯಸ್ ಸೀಸನ್-2” ಈ ವಾರದ ಎಪಿಸೋಡ್‌ನಲ್ಲಿ ಬೆಂಗಳೂರು ಮೂಲದ ರಾಹುಲ್ ವೆಲ್ಲಾಲ್ ಹಾಗೂ ಸಿರಿ ಗಿರೀಶ್ ಭಾಗವಹಿಸಿದ್ದರು.

ನ್ಯೂಸ್-18 ನೆಟ್‌ವರ್ಕ್‌ನಲ್ಲಿ ಪ್ರತಿ ಶನಿವಾರ ಹಾಗೂ ಭಾನುವಾರ ಪ್ರಸಾರವಾಗುವ ಈ ಕಾರ್ಯಕ್ರಮ ದೇಶಾ ದ್ಯಂತ ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ವೇದಿಕೆ ಕಲ್ಪಿಸಿಕೊಡುತ್ತಾ ಬಂದಿದೆ. ಸೀಸನ್-2ರ ಎರಡನೇ ವಾರ ಬೆಂಗಳೂರು ಮೂಲದವರಾದ ರಾಹುಲ್ ವೆಲ್ಲಾಲ್ ಭಾಗವಹಿಸಲು ಅವಕಾಶ ದೊರಕಿದೆ. ಕೇವಲ 14ನೇ ವಯಸ್ಸಿನೊಳಗೆ ರಾಹುಲ್ ಕರ್ನಾಟಿಕ್ ಮ್ಯೂಸಿಕ್‌ನಲ್ಲಿ ಪರಿಣಿತನಾಗಿದ್ದು, ಎಲ್ಲಾ ಬಗೆಯ ಶಾಸ್ತ್ರೀಯ ಸಂಗೀತ ದಲ್ಲಿ ನಿಪುಣತೆ ಸಾಧಿಸಿದ್ದಾರೆ. ಅಷ್ಟೆ ಅಲ್ಲದೆ, ತನ್ನ ಎರಡೂವರೆ ವಯಸ್ಸಿನಲ್ಲಿಯೇ ಒಮ್ಮೆ ಕೇಳಿದ ಸಂಗೀತವನ್ನು ಮನನ ಮಾಡಿಕೊಂಡು, ಅದನ್ನ ಹಾಡುವ ಹವ್ಯಾಸ ಬೆಳೆಸಿಕೊಂಡಿದ್ದ.

ತನ್ನ 6ನೇ ವಯಸ್ಸಿನಲ್ಲಿ ವೇದಿಕೆ ಏರಿದ ರಾಹುಲ್, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಹಲವು ಕಾರ್ಯ ಕ್ರಮ ನೀಡುವ ಜೊತೆಗೆ ಹಲವು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಕನ್ನಡ,ತಮಿಳು, ತೆಲುಗು, ಹಿಂದಿ, ಮರಾಠಿ ಹಾಗೂ ಗುಜರಾತಿ ಭಾಷೆಯಲ್ಲಿ ಸಂಗೀತ ಪ್ರದರ್ಶನ ನೀಡಿದ್ದಾರೆ. ಪ್ರತಿಷ್ಠಿತ ಷಣ್ಮುಗಾನಂದ ಎಂ.ಎಸ್. ಸುಬ್ಬಲಕ್ಷ್ಮಿ ಫೆಲೋಶಿಪ್ ಪಡೆದಿರುವ ರಾಹುಲ್, ಅನೇಕ ಸಿನಿಮಾ ಹಾಗೂ ಸಿನಿಮಾಗಳಿಗೆ ಧನಿ ನೀಡುವ ಮೂಲಕವೂ ಪ್ರಶಂಸೆ ಪಡೆದಿದ್ದಾರೆ,

ಇನ್ನು, 15 ವರ್ಷದ ಬಾಲಕಿ ಸಿರಿಗಿರೀಶ್ ಸಹ ಬೆಂಗಳೂರು ಮೂಲದವರೇ ಆಗಿದ್ದು, ಈಕೆ ಕರ್ನಾಟಿಕ್ ರಾಗ ಕಂಪೋಸರ್ ಆಗಿ ಈಗಾಗಲೇ ಸಾಧನೆ ಮಾಡಿ ದ್ದಾರೆ. ಅತಿ ಸಣ್ಣವಯಸ್ಸಿನ ಕರ್ನಾಟಿಕ್ ರಾಗ ಕಂಪೋಸರ್ ಎಂಬ ಬಿರುದನ್ನೂ ಪಡೆದಿದ್ದಾರೆ. ಈ ಇಬ್ಬರೂ ತಮ್ಮ ಪ್ರತಿಭೆಯಿಂದ ಈ ವಿಶೇಷ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದರು. ಈ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ಸಂಗೀತ ಸಂಯೋಜಕರಾದ ಶಂಕರ್ ಮಹದೇವನ್ ಅವರು ಈ ಮಕ್ಕಳ ಪ್ರತಿಭೆ ಯನ್ನು ಶ್ಲಾಘಿಸಿದರು. ಅಲ್ಲದೆ, ರಾಹುಲ್ ಜೊತೆಗೂಡಿ ಕರ್ನಾಟಿಕ್ ಸಂಗೀತದಲ್ಲಿಯೇ ವಂದೇ ಮಾತರಂ ಹಾಡನ್ನು ಹಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಿದರು.

ನ್ಯೂಸ್18 ನೆಟ್‌ವರ್ಕ್ ಮಕ್ಕಳ ವಿಶೇಷ ಪ್ರತಿಭೆಯನ್ನು ಗುರುತಿಸಿ ವೇದಿಕೆ ಕಲ್ಪಿಸಲು ಬೈಜೂಸ್ ಯಂಗ್ ಜೀನಿಯಸ್ ಸೀಸನ್ ನಡೆಸುತ್ತಿದೆ. ಸೀಸನ್-2 ಆಡಿ ಷನ್‌ನಲ್ಲಿ ದೇಶಾದ್ಯಂತ 22 ಸಾವಿರಕ್ಕೂ ಹೆಚ್ಚು ಮಕ್ಕಳನ್ನು ಆಡಿಷನ್ ಮಾಡಿ, ಅದರಲ್ಲಿ ಕೇವಲ 22 ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಲಾಗಿದೆ. ಆ ಪೈಕಿ ಬೆಂಗಳೂರಿನ ರಾಹುಲ್ ವೆಲ್ಲಾಲ್ ಹಾಗೂ ಸಿರಿ ಗಿರೀಶ್ ಎಂಬುದು ಹೆಮ್ಮೆಯ ಸಂಗತಿ.

error: Content is protected !!