Monday, 20th May 2024

ಹಿರಿಯೂರು ಬಳಿ ಹೆಲಿಕಾಫ್ಟರ್ ತುರ್ತು ಭೂ ಸ್ಪರ್ಶ

ಚಿತ್ರದುರ್ಗ: ಸಚಿವ ಬೈರತಿ ಸುರೇಶ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಫ್ಟರ್ ತಾಂತ್ರಿಕ ಸಮಸ್ಯೆ ಉಂಟಾಗಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಆರನಕಟ್ಟೆ ಗ್ರಾಮದ ಹೈಸ್ಕೂಲ್ ಮೈದಾನದಲ್ಲಿ ಲ್ಯಾಂಡ್ ಆದ ಘಟನೆ ನಡೆದಿದೆ.

ಅದೃಷ್ಟವಶಾತ್ ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ.

ಬೆಂಗಳೂರಿಗೆ ವಾಪಾಸ್ ಆಗುತ್ತಿದ್ದ ವೇಳೆಯಲ್ಲಿ ತಾಂತ್ರಿಕ ಕಾರಣದಿಂದ ಚಿತ್ರದುರ್ಗದ ಹಿರಿಯೂರು ಬಳಿ ತುರ್ತು ಭೂ ಸ್ಪರ್ಶ ಮಾಡಿರುವುದಾಗಿ ತಿಳಿದು ಬಂದಿದೆ.

ವಿವಿಧ ಕಾರ್ಯಕ್ರಮಗಳ ಪ್ರಯುಕ್ತ ಚಿತ್ರದುರ್ಗ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳಿಗೆ ಸಚಿವ ಬೈರತಿ ಸುರೇಶ್ ಭೇಟಿ ನೀಡಿದ್ದರು. ಇಲ್ಲಿಂದ ಸಚಿವ ಬೈರತಿ ಸುರೇಶ್ ಕಾರಿನಲ್ಲಿ ಬೆಂಗಳೂರಿಗೆ ಪ್ರಯಾಣಿಸಿದ್ದಾರೆ ಎನ್ನಲಾಗುತ್ತಿದೆ

Leave a Reply

Your email address will not be published. Required fields are marked *

error: Content is protected !!