Thursday, 18th April 2024

ಜನಸಂದಣಿ ಸ್ಥಳಗಳಲ್ಲಿ ಕೊಟ್ಪಾ ಕಾಯ್ದೆಯ ಅರಿವು ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿರುವ ಕೈಗಾರಿಕೆಗಳು, ಕಟ್ಟಡ ನಿರ್ಮಾಣ ಸ್ಥಳಗಳು, ಕಲ್ಲು ಕ್ವಾರಿ, ಗಣಿಗಾರಿಕೆ ಸ್ಥಳಗಳು  ಸೇರಿದಂತೆ ಜನಸಂದಣಿ ಪ್ರದೇಶಗಳಲ್ಲಿನ ಶ್ರಮಿಕ ವರ್ಗದವರಿಗೆ ತಂಬಾಕು ಉತ್ಪನ್ನಗಳ ಬಳಕೆಯ ದುಷ್ಪರಿಣಾಮಗಳ ಕುರಿತು ತಿಳಿಸಿ ಕೊಡಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ. ಎನ್.ತಿಪ್ಪೇಸ್ವಾಮಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯ ಕ್ರಮ ಕಾಯ್ದೆಯ ತ್ರೆöÊಮಾಸಿಕ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದರು.

ಕೊಟ್ಪಾ ಕಾಯ್ದೆಯನ್ನು ಯಶಸ್ವಿಯಾಗಿ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಸಂಬ0ಧ ಎಲ್ಲಾ ಇಲಾಖೆಗಳು  ಸಾಂಘಿಕವಾಗಿ ಕಾರ್ಯ ಪ್ರವೃತ್ತರಾಗಬೇಕು.ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ತಹಸೀಲ್ದಾರ್ ರವರ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯ ಬೇಕು.

ಕೊಟ್ಪಾ ಕಾಯ್ದೆ ಸೆಕ್ಷನ್ ೬ಬಿ, ೭, ೮ & ೯ ರಡಿ ಪ್ರಕರಣ ದಾಖಲಿಸಲು ಹೆಚ್ಚೆಚ್ಚು ದಾಳಿ ಗಳನ್ನು ಮಾಡಿ ದಂಡ ವಸೂಲಿ ಮಾಡಬೇಕು. ಕಾಲೇಜುಗಳಲ್ಲಿ, ಬಸ್ ನಿಲ್ದಾಣಗಳು, ಕಾರ್ಮಿಕರು ಸೇರುವ ಸ್ಥಳಗಳು, ಮಾರುಕಟ್ಟೆಗಳು ಇನ್ನಿತರ ಜನಸಂದಣಿ ಸ್ಥಳಗಳಲ್ಲಿ ಹೆಚ್ಚು ಐ.ಇ.ಸಿ ಕಾರ್ಯಕ್ರಮಗಳನ್ನು  ಏರ್ಪಡಿಸಿ  ಅರಿವು ಮೂಡಿಸಬೇಕು. ಕಾರ್ಮಿಕ ಇಲಾಖೆ, ಅಬಕಾರಿ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸ್ಥಳೀಯಾಡಳಿತ ಸಂಸ್ಥೆಗಳು ಹಾಗೂ  ಇತರೆ ಇಲಾಖೆಗಳು  ಆರೋಗ್ಯ ಇಲಾಖೆಯೊಂದಿಗೆ ಸಮನ್ವಯತೆಯೊಂದಿಗೆ ಕಾರ್ಯನಿರ್ವಹಿಸಬೇಕು. ಆ ಮೂಲಕ ಜಿಲ್ಲೆಯನ್ನು ತಂಬಾಕು ಮುಕ್ತವಾಗಿಸಲು ಪ್ರಮಾಣಿಕ ಪ್ರಯತ್ನ ಮಾಡಬೇಕು ಎಂದು ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್.ಮಹೇಶ್ ಕುಮಾರ್, ಜಿಲ್ಲಾ ಶಸ್ತç ಚಿಕಿತ್ಸಕ ಡಾ.ರಾಜಾರೆಡ್ಡಿ, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.

error: Content is protected !!