Sunday, 19th May 2024

ಮತ್ತೊಮ್ಮೆ ಈಶ್ವರಪ್ಪ ಸಚಿವರಾಗಲಿದ್ದಾರೆ: ಯಡಿಯೂರಪ್ಪ ಭವಿಷ್ಯ

ಶಿವಮೊಗ್ಗ: ಸಚಿವ ಈಶ್ವರಪ್ಪ ತಪ್ಪು ಮಾಡಿಲ್ಲ. ಕಾನೂನಿಗೆ ತಲೆಬಾಗಿ ರಾಜೀನಾಮೆ ಕೊಟ್ಟಿದ್ದಾರೆ. ಮತ್ತೊಮ್ಮೆ ಅವರು ಸಚಿವರಾಗಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭವಿಷ್ಯ ಹೇಳಿದ್ದಾರೆ.

ಈಶ್ವರಪ್ಪನವರು ಸ್ವಯಂಪ್ರೇರಿತರಾಗಿ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಆಗಬಾರದೆಂದು ರಾಜೀನಾಮೆ ಕೊಟ್ಟಿದ್ದಾರೆ. ಈ ಪ್ರಕರಣದಲ್ಲಿ ಅವರು ಏನು ತಪ್ಪು ಮಾಡಿಲ್ಲ. ಖಂಡಿತವಾಗಿಯೂ ಆರೋಪ ಮುಕ್ತರಾಗಿ ಹೊರಬರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ತನಿಖೆಗೆ ಸಹಾಯವಾಗಲಿ ಎಂದು ಸಚಿವ ಸ್ಥಾನವನ್ನು ತ್ಯಾಗ ಮಾಡಿದ್ದಾರೆ. ರಾಜೀನಾಮೆ ನೀಡಬೇಕೆಂದು ಹಿರಿಯರು ಕೂಡ ಸಲಹೆಯನ್ನು ನೀಡಿರಲಿಲ್ಲ. ಸ್ವಯಂಪ್ರೇರಿತರಾಗಿ ರಾಜೀನಾಮೆ ಕೊಟ್ಟಿದ್ದಾರೆ.

ನನಗೆ ಖಂಡಿತವಾಗಿಯೂ ಅವರು ಆರೋಪ ಮುಕ್ತರಾಗಿ ಪುನಃ ಬರುತ್ತಾರೆ ಎಂಬ ವಿಶ್ವಾಸವಿದೆ. ಈ ಬೆಳವಣಿಗೆಯಿಂದ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರವಾಗುವುದಿಲ್ಲ ಎಂದು ಹೇಳಿದರು.

 

error: Content is protected !!