ಕುಲಶೇಖರ ಕೋರ್ಡೆಲ್ ಚರ್ಚ್ ಮೈದಾನದಲ್ಲಿ ಸಂಜೆ ಕಾರ್ಯಕ್ರಮ ನಡೆಯಲಿದ್ದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ. ಪಾಟೀಲ್, ಸಚಿವರಾದ ಸುನಿಲ್ ಕುಮಾರ್, ಎಸ್. ಅಂಗಾರ ಭಾಗವಹಿಸಲಿರುವರು ಎಂದರು.
ಈ ವೇಳೆ ರಾಷ್ಟ್ರೀಯ ಹೆದ್ದಾರಿ 66ರ ಎನ್ಎಂಪಿಟಿ ಸಂಪರ್ಕಿಸುವ ಕೆಪಿಟಿ ಜಂಕ್ಷನ್ನಲ್ಲಿ 34.61 ಕೋ.ರೂ. ವೆಚ್ಚದಲ್ಲಿ ವಿಯುಪಿ ನಿರ್ಮಾಣ, ರಾ.ಹೆ. 75ರ ಬೆಂಗಳೂರು -ಮಂಗಳೂರು ವಿಭಾಗದಲ್ಲಿ ಗುಂಡ್ಯ ಅಡ್ಡ ಹೊಳೆ ಯಿಂದ ಪೆರಿಯಶಾಂತಿ ವರೆಗೆ 442.87 ಕೋ.ರೂ. ವೆಚ್ಚದ 15.13 ಕಿ.ಮೀ. ದೂರದ ನಾಲ್ಕು ಪಥ ರಸ್ತೆ ನಿರ್ಮಾಣ, ಗುಂಡ್ಯ ಅಡ್ಡಹೊಳೆಯಿಂದ ಪೆರಿಯಶಾಂತಿ -ಬಂಟ್ವಾಳಕ್ಕೆ 48.48 ಕಿ.ಮೀ. ದೂರಕ್ಕೆ 1,480.85 ಕೋ. ರೂ. ವೆಚ್ಚದ ಚತುಷ್ಪಥ ನಿರ್ಮಾಣ ಮತ್ತು ಕಲ್ಲಡ್ಕ ಪೇಟೆಯಲ್ಲಿ 6 ಪಥದ ಮೇಲ್ಸೇತುವೆ ಕಾಮಗಾರಿ, ರಾ.ಹೆ. 169ರ ಬಿಕರ್ನಕಟ್ಟೆ-ಸಾಣೂರು ನಡುವೆ 45.01 ಕಿ.ಮೀ. ದೂರದ 1,137 ಕೋ.ರೂ. ವೆಚ್ಚದ ರಸ್ತೆ ನಿರ್ಮಾಣ ಕಾಮಗಾ ರಿಗೆ ಶಿಲಾನ್ಯಾಸ ನಡೆಯಲಿದೆ ಎಂದರು.
ರಾ.ಹೆ. 234ರ ಬಿ.ಸಿ.ರೋಡ್- ಪುಂಜಾಲಕಟ್ಟೆ ಭಾಗದ 20.15 ಕಿ.ಮೀ.ನಿಂದ 40 ಕಿ.ಮೀ. ವರೆಗೆ 19.85 ಕಿ.ಮೀ. ದೂರದ ದ್ವಿಪಥ ರಸ್ತೆ 159.70 ಕೋ.ರೂ. ವೆಚ್ಚದಲ್ಲಿ ವಿಸ್ತರಣೆಯಾಗಿದ್ದು, ಅದರ ಲೋಕಾರ್ಪಣೆ ನೆರವೇರಲಿದೆ ಎಂದು ನಳಿನ್ ತಿಳಿಸಿದರು.