Thursday, 28th March 2024

ಗುಂಡ್ಲುಪೇಟೆಯಲ್ಲಿ ಅಮಿತ್ ಶಾ ರೋಡ್ ಶೋ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ನಡೆಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಹಾಲಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್ ಪರ ಅಮಿತ್ ಶಾ ಪ್ರಚಾರ ನಡೆಸಿದ್ದಾರೆ. ನಂತರ ಮಾತನಾಡಿ, ಮುಸ್ಲಿಂ ಹಾಗೂ ಎಸ್ಸಿ ಎಸ್ಟಿ ಸಮುದಾಯಕ್ಕೆ ಮೀಸಲಾತಿ ನೀಡಿರುವುದು ಬಿಜೆಪಿ ಸರ್ಕಾರ. ಕಾಂಗ್ರೆಸ್ ಸರ್ಕಾರ ಕೇವಲ ಕಣ್ಣೊರೆ ಸುವ ಕೆಲಸ ಮಾಡಿದೆ ಎಂದು ಕಿಡಿಕಾರಿದರು.

ಎಲ್ಲಾ ಜನ ಅಭಿವೃದ್ದಿಯಾಬೇಕಾದರೆ ಬಿಜೆಪಿ ಸರ್ಕಾರ ಬರಬೇಕಿದೆ. ಈ ಬಾರಿ ನಿರಂಜನ್ ಕುಮಾರ್ಗೆ ಮತ ಹಾಕಿ ಎಂದು ಮನವಿ ಮಾಡಿಕೊಂಡರು. ಅಮಿತ್ಶಾಗೆ ಸಂಸದ ಪ್ರತಾಪ್ ಸಿಂಹ, ಸಿ.ಎಸ್.ನಿರಂಜನ್ ಕುಮಾರ್ ಸಾಥ್ ನೀಡಿದರು.

 

error: Content is protected !!