Sunday, 19th May 2024

ಪ್ರಾಮಾಣಿಕತೆಗೆ ಸಂದ ಗೌರವ: ಕೇಂದ್ರ ಸಚಿವ ಭಗವಂತ ಖೂಬಾ

ಕೊಪ್ಪಳ: ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಬಳ್ಳಾರಿ ವಿಭಾಗದ ಸಹ ಪ್ರಭಾರಿಯಾಗಿ ನೇಮಕವಾದ ಚಂದ್ರಶೇಖರಗೌಡ ಪಾಟೀಲ ಹಲಗೇರಿ ಅವರನ್ನು ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಮತ್ತು ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬ, ನಿರಂತರವಾಗಿ ಪಕ್ಷದ ಸಂಘಟನೆಯಲ್ಲಿ ತಮಗೆ ವಹಿಸಿದ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ಪ್ರಾಮಾಣಿಕವಾಗಿ ಮಾಡುವ ಹಾಗೂ, ಸರಳ ಸಜ್ಜನಿಕೆಯ ವ್ಯಕ್ತಿಯಾದ ಚಂದ್ರಶೇಖರಗೌಡ ಪಾಟೀಲ ಹಲಗೇರಿ ಅವರನ್ನು ಪಕ್ಷ ಗುರುತಿಸಿ ಈ ಮಹತ್ತರವಾದ ಜವಾಬ್ದಾರಿ ನೀಡಿ ಪ್ರಮಾಣಿಕತೆಗೆ ಸಂದ ಗೌರವವಾಗಿದೆ ಎಂದರು.

ಈ ದಿಶೆಯಲ್ಲಿ ಅವರು ಬಳ್ಳಾರಿ ವಿಭಾಗದ ಜಿಲ್ಲೆಗಳಲ್ಲಿ ಪಕ್ಷದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಪಕ್ಷ ಸಂಘಟನೆ ಯಲ್ಲಿ ಯಶಸ್ವಿ ನಾಯಕರಾಗಲಿ, ಮುಂದಿನ ದಿನಗಳಲ್ಲಿ ಅವರ ರಾಜಕೀಯ ಭವಿಷ್ಯ ಉಜ್ವಲದಿಂದ ಕೂಡಿರಲೆಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್, ಸಂಸದ ಕರಡಿ ಸಂಗಣ್ಣ, ಗಂಗಾವತಿ ಶಾಸಕ ಪರಣ್ಣ ಮುನವಳ್ಳಿ ಕನಕಗಿರಿ ಶಾಸಕ ಬಸವರಾಜ ದಡೇಸುಗೂರು, ವಿಧಾನ ಪರಿಷತ್ ಸದಸ್ಯ ಅಶ್ವತ್ಥ ನಾರಾಯಣ, ರಾಜ್ಯ ಕಾರ್ಯದರ್ಶಿ ಹೇಮಲತಾ ನಾಯಕ, ಜಗದೀಶ್ ಹಿರೇಮನಿ, ವಿಭಾಗ ಪ್ರಭಾರಿ ಸಿದ್ದೇಶ ಯಾದವ್, ಜಿಲ್ಲಾ ಪ್ರಭಾರಿ ಪ್ರಭುರಾಜ ಕಪ್ಪಗಲ್, ಜಿಲ್ಲಾ ಉಪಾಧ್ಯಕ್ಷ ರಾಘವೇಂದ್ರ ಶ್ರೇಷ್ಠಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ನಾಡಿಗೇರ, ರಾಷ್ಟ್ರೀಯ ಪರಿಷತ ಸದಸ್ಯ ಸಿ.ವಿ ಚಂದ್ರಶೇಖರ, ಕೆಡಿಪಿ ಸದಸ್ಯ ಅಮರೇಶ ಕರಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಗಿರೀಶಾನಂದ ಜ್ಞಾನಸುಂದರ ಹಾಗೂ ಅನೇಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!