ಶಿವಮೊಗ್ಗ : ನವೆಂಬರ್ 17ರಿಂದ ರಾಜ್ಯದಲ್ಲಿ ಕಾಲೇಜುಗಳ ಆರಂಭದ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರು, ತಜ್ಞರ ಅಭಿಪ್ರಾಯದ ನಿರ್ಧಾರ ಮೇಲೆ ಕ್ರಮ ಕೈಗೊಳ್ಳುವುದಾಗಿ ಭಾನುವಾರ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಹೀಗಾಗಿ, ನವೆಂಬರ್ 17ರಿಂದ ಕಾಲೇಜು ಆರಂಭವಾಗುವುದು ಸಂಶಯ ಎಂಬಂತಾಗಿದೆ.
ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸಚಿವರು, ತಜ್ಞರ ಸಭೆಯಲ್ಲಿ ನವೆಂಬರ್ 17ರಿಂದ ರಾಜ್ಯದಲ್ಲಿ ಡಿಗ್ರಿ, ಡಿಪ್ಲೊಮಾ ಹಾಗೂ ಇಂಜಿನಿಯರಿಂಗ್ ಕಾಲೇಜುಗಳ ಆರಂಭದ ತೀರ್ಮಾನ ಕೈಗೊಳ್ಳಲಾಗಿತ್ತು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ, ರಾಜ್ಯಕ್ಕೆ ಎರಡು ಸಂಕಷ್ಟ ಬಂದಿದೆ. ಒಂದು ಕೊರೋನಾ ಸೋಂಕಿನ ಹಾವಳಿ, ಮತ್ತೊಂದು ಉತ್ತರ ಕರ್ನಾಟಕದ ನೆರೆ ಪರಿಹಾರವಾಗಿದೆ. ಎರಡನ್ನೂ ಸಮರ್ಪಕವಾಗಿ ನಿಭಾಯಿಸುವಂತ ಕೆಲಸವನ್ನು ಮಾಡುತ್ತಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ನವೆಂಬರ್ 17ರ ನಂತ್ರ ಕಾಲೇಜು ಆರಂಭದ ಬಗ್ಗೆ ಪ್ರತಿಕ್ರಿಯಿಸಿ, ತಜ್ಞರ ಅಭಿಪ್ರಾಯದ ಮೇಲೆ ನಿರ್ಧಾರ ಕೈಗೊಳ್ಳ ಲಿದ್ದೇವೆ. ಪೋಷಕರು, ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದರು.