Sunday, 19th May 2024

ಮಟ್ಟಿಹಾಳ ಗ್ರಾಮಕ್ಕೆ ಭೇಟಿ ನೀಡಿದ ಕ್ಯಾಪ್ಟನ್ ಮಹೇಶ ಮಾಲಗತ್ತಿ

ಕೋಲಾರ:  ಡಾ॥ಬಿ.ಆರ್ ಅಂಬೇಡ್ಕರ್ ಹಾಗೂ ಬಸವೇಶ್ವರ ವೃತ್ತಗಳ ವಿಷಯವಾಗಿ ತಾಲ್ಲೂಕಿನ ಮಟ್ಟಿಹಾಳ ಕ್ರಾಸ್ ನಲ್ಲಿ ನಡೆದಿದ್ದ ಗೊಂದಲದ ಹಿನ್ನೆಲೆಯಲ್ಲಿ ಉಪವಿಭಾಗ ಅಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗತ್ತಿ ಮಟ್ಟಿಹಾಳ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಮುಂಚೆ ತಹಸೀಲ್ದಾರ ಪಿ.ಜಿ ಪವಾರ್ ಗ್ರಾಮದ ಮುಖಂಡರೊಂದಿಗೆ ಎರಡು ಸುತ್ತಿನ ಸಭೆ ನಡೆಸಲಾಗಿತ್ತು ಆ ಸಭೆ ಫಲಪ್ರದ ವಾಗಿರಲಿಲ್ಲ. ಸಾಯಂಕಾಲದ ಹೊತ್ತಿಗೆ ಉಪವಿಭಾಗ ಅಧಿಕಾರಿ ಕ್ಯಾಪ್ಟನ್ ಮಹೇಶ ಮಾಲಗತ್ತಿ ಭೇಟಿ ನೀಡಿ ಗ್ರಾಮದ ಮುಖಂಡ ರೊಂದಿಗೆ ಚರ್ಚಿಸಿ ಈ ಬಗ್ಗೆ ಮಾದ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಸದ್ಯ ಯಥಾಸ್ಥಿಯಾಗಿ ಕಾಪಾಡಿಕೊಂಡು ಹೋಗಬೇಕು ಎರಡು ದಿನಗಳ ಒಳಗಾಗಿ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

error: Content is protected !!