Sunday, 19th May 2024

ಬ್ರೇಕಿಂಗ್‌: ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್

ಮೈಸೂರು : ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ಮೈಸೂರು ಜಿಲ್ಲಾಡಳಿತವು ತಾತ್ಕಾಲಿಕ ಬ್ರೇಕ್ ಹಾಕಿದ್ದು, ರಾಜ್ಯ ಸರ್ಕಾರದ ಮುಂದಿನ ಆದೇಶ ಬರುವವರೆಗೆ ಯಾಥಾಸ್ಥಿತಿ ಮುಂದುವರಿಸಲು ಆದೇಶ ನೀಡಿದೆ.

ನಂಜನಗೂಡು ದೇಗುಲ ತೆರವು ಕಾರ್ಯ ವಿಚಾರಕ್ಕೆ ರಾಜ್ಯ ಸರ್ಕಾರ ನೋಟಿಸ್ ಬಂದಿದ್ದು, ಹೀಗಾಗಿ ಸದ್ಯಕ್ಕೆ ಮೈಸೂರಿನಲ್ಲಿ ದೇಗುಲಗಳ ತೆರವು ಕಾರ್ಯಕ್ಕೆ ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ. ಸರ್ಕಾರದ ನಿರ್ದೇಶನ ಬರುವವರೆಗೆ ಯಾವುದೇ ದೇಗುಲಗಳ ತೆರವು ಕಾರ್ಯಾಚರಣೆ ಇರುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಗೌತಮ್ ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ದೇವಸ್ಥಾನ ತೆರವು ಕಾರ್ಯಾಚರಣೆ ವಿರೋಧಿಸಿ, ಬಿಜೆಪಿ ಸಂಸದ ಪ್ರತಾಪ್ ಸಿಂಹ, ಕಾಂಗ್ರೆಸ್ ನಾಯಕ ತನ್ವೀತ್‌ ಸೆಠ್ ಮುಂತಾದವರ ನಡುವೆ ಬಹಿರಂಗ ವಾಗ್ಯುದ್ದ ನಡೆದು, ಹೆಚ್ಚು ತಾರಕಕ್ಕೇರಿತ್ತು.

Leave a Reply

Your email address will not be published. Required fields are marked *

error: Content is protected !!