Monday, 13th May 2024

ಸಿಐಡಿಯಿಂದ ನೇಹಾ ಹತ್ಯೆ ಕೇಸ್‌ ತನಿಖೆ : ಸಿಎಂ ಸಿದ್ದರಾಮಯ್ಯ

ಶಿವಮೊಗ್ಗ: ನೇಹಾ ಹತ್ಯೆ ಕೇಸ್‌ ಸಿಐಡಿಗೆ ವಹಿಸಲಿದೆ ಎಂದು ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಮಾತನಾಡಿ. ಪ್ರಕರಣವನ್ನು ಸಿಐಡಿಗೆ ವಹಿಸಲಾಗುವುದು ಎಂದು ಅವರು ಇದೇ ವೇಳೆ ಹೇಳಿದರು.

ಇನ್ನೂ ಶೀಘ್ರದಲ್ಲಿ ನೇಹಾಳ ಹತ್ಯೆ ಕೇಸ್‌ ಅನ್ನು ಸಿಐಡಿ ಅಧಿಕಾರಿಗಳು ನಡೆಸಲಿದ್ದು, ಈ ಬಗ್ಗೆ ಆದೇಶವನ್ನು ಪೊಲೀಸ್ ಹಿರಿಯ ಅಧಿಕಾರಿಗಳು ಸೋಮವಾರ ಸಂಜೆಯೊಳಗೆ ಹೊರಡಿಸಲಿದ್ದಾರೆ ಎನ್ನಲಾಗಿದೆ. ಇನ್ನೇರಡು ದಿನದಲ್ಲಿ ಹತ್ಯೆಗೆ ಸಂಬಂಧಪಟ್ಟಂತೆ ಸ್ಥಳೀಯ ಪೊಲಿಸ್‌ ಅಧಿಕಾರಿಗಳಿಂದ ಸಿಐಡಿಗಳು ಮಾಹಿತಿಯನ್ನು ಪಡೆದುಕೊಂಡು ಬಳಿಕ ತನಿಖೆಯನ್ನು ಶುರುಮಾಡಲಿದ್ದಾರೆ. ಸಿಐಡಿಯಲ್ಲಿ ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳೇ ಇರಲಿದ್ದಾರೆ.

ಈ ನಡುವೆ , ನೇಹಾಳನ್ನು 9 ಅಲ್ಲ ಬದಲಾಗಿ 14 ಬಾರಿ ಚುಚ್ಚಿ ಕೊಂದಿದ್ದಾನೆ. ನೇಹಾ ಹಿರೇಮಠ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ ಎನ್ನಲಾಗಿದೆ. ಇದಲ್ಲದೇ ಕುತ್ತಿಗೆಗೆ ಹಲವು ಬಾರಿ ಇರಿದಿದ್ದರಿಂದ ರಕ್ತನಾಳ ತುಂಡಾಗಿ ವಿಪರೀತ ರಕ್ತಸ್ರಾವವಾಗಿದೆ, ಹೀಗಾಗಿ ರಕ್ತಸ್ರಾವದಿಂದಲೇ ಆಕೆ ಸಾವನ್ನಪ್ಪಿದ್ದಾಳೆ ಎನ್ನುವ ಆಘಾತಕಾರಿ ಮಾಹಿತಿ ಹೊರಬಿದಿದ್ದೆ.

ಏ.18 ರಂದು ಆರೋಪಿ ಫಯಾಜ್ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್​ ಸದಸ್ಯರಾದ ನಿರಂಜನ್ ಹಿರೇಮಠ್ ಅವರ ಪುತ್ರಿ, ಬಿವಿಬಿ ಕಾಲೇಜು ವಿದ್ಯಾರ್ಥಿನಿ ನೇಹಾ ಹತ್ಯೆ ಮಾಡಿದನ್ನು. ಸದ್ಯ ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಲ್ಲಿದ್ದಾನೆ.

Leave a Reply

Your email address will not be published. Required fields are marked *

error: Content is protected !!