Saturday, 27th July 2024

ಶಿವಸೇನೆಯ ಪುಂಡತನಕ್ಕೆ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ಬಸ್ ಸೇವೆ ಸ್ಥಗಿತ

ಬೆಳಗಾವಿ: ಗಡಿ ಭಾಗದಲ್ಲಿ ಶಿವಸೇನೆಯ ಪುಂಡರು ಕರ್ನಾಟಕ ಸಾರಿಗೆ ಸಂಸ್ಥೆಗಳ ಬಸ್’ಗಳಿಗೆ ಕಪ್ಪು ಮಸಿ ಬಳಿದು, ಕಲ್ಲು ತೂರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ರಾಜ್ಯಗಳ ಮಧ್ಯದ ಬಸ್ ಸೇವೆಗಳನ್ನು ಸ್ಥಗಿತಗೊಳಿಸ ಲಾಗಿದೆ ಎಂದು ವರದಿಯಾಗಿದೆ.

ಕರ್ನಾಟಕ ರಾಜ್ಯದ ಬಸ್ ಗಳಿಗೆ ಕಪ್ಪು ಮಸಿ ಬಳಿದು, ಕಲ್ಲು ತೂರಾಟ ನಡೆಸಿರುವ ಪುಂಡರು ಕೊಲ್ಹಾಪುರದಲ್ಲಿ ಅಂಗಡಿಗಳಿಗೆ ಅಳವಡಿಸಿದ್ದ ಕನ್ನಡ ನಾಮಫಲಕಗಳಿಗೆ ಕಪ್ಪು ಮಸಿ ಬಳಿದು, ಅವುಗಳನ್ನು ಹರಿದು ಹಾಕಿದ್ದಾರೆ.

ಈ ಎಲ್ಲಾ ಬೆಳವಣಿಗೆ ಹಿನ್ನೆಲೆಯಲ್ಲಿ ಕರ್ನಾಟಕ-ಮಹಾರಾಷ್ಟ್ರ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

Leave a Reply

Your email address will not be published. Required fields are marked *

error: Content is protected !!