ಬೆಳಗಾವಿ: ತಾಲ್ಲೂಕಿನ ಶಿಂದೊಳ್ಳಿಯಲ್ಲಿ ಚಲನಚಿತ್ರ ನಟ ಪುನೀತ್ ರಾಜ್ಕುಮಾರ್ ನಿಧನದಿಂದ ನೊಂದ ಅಭಿಮಾನಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಆ ಗ್ರಾಮದ ಕನಕದಾಸ ನಗರದ ಪರುಶರಾಮ ಹನುಮಂತ ದೇಮಣ್ಣವರ(33) ಮೃತ. ಪುನೀತ್ ಸಾವಿನ ಸುದ್ದಿ ತಿಳಿದು ಆಘಾತಕ್ಕೆ ಒಳಗಾಗಿದ್ದರು. ಕೂಲಿ ಮಾಡುತ್ತಿದ್ದ ಪರುಶರಾಮ, ಶಿವರಾಜ್ಕುಕುಮಾರ್ ಹಾಗೂ ಪುನೀತ್ ಅವರ ಅಪ್ಪಟ ಅಭಿಮಾನಿ ಆಗಿದ್ದರು ಎಂದು ಸ್ಥಳೀಯರು ತಿಳಿಸಿದರು.