
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಮಹಾತ್ವಗಾಂಧಿ ಕ್ರೀಡಾಂಗಣದ ಎದುರು ಇರುವ ಒಳಾಂಗಣ ಕ್ರೀಡಾಂಗಣ ದಲ್ಲಿ ರಾಷ್ಟ್ರ ಮಟ್ಟದ 10 ಮೀ. ಏರ್ ರೈಫಲ್ ಶೂಟಿಂಗ್ ಪಂದ್ಯಾವಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಕಫ್ ಎಂದು ಹೆಸರಿಡಲಾಗಿದೆ.ಐದು ದಿನಗಳ ಕಾಲ ನಡೆಯುವ ಈ ಪಂದ್ಯಾವಳಿಯಲ್ಲಿ ವಿವಿಧ 56 ಕ್ಯಾಟಗೆರಿಯಲ್ಲಿ ಸಬ್ ಜೂನಿಯರ್, ಜೂನಿಯರ್,ಸಿನಿಯರ್ ಸೇರಿ ಒಟ್ಟು 800ಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಪಂದ್ಯಾವಳಿಯಲ್ಲಿ ಪಾಲ್ಗೊಳ್ಳಲಿ ದ್ದಾರೆ. ಮೊದಲ ಬಹುಮಾನವಾಗಿ 5000, ಎರಡನೇ ಬಹುಮಾನವಾಗಿ 3000 ಮತ್ತು 3ನೇ ಬಹುಮಾನವಾಗಿ 2000 ಸೇರಿದಂತೆ ಒಟ್ಟು 4 ಲಕ್ಷ ಬಹುಮಾನ ಈ ಟೂನಿಯಲ್ಲಿ ನೀಡಲಾಗುತ್ತಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕನ್ನಡ ಸೇನೆಯ ಧನಿಯಕುಮಾರ್, ಕ್ರೀಡಾ ಪ್ರೋತ್ಸಾಹಕರಾದ ಶ್ರೀನಿವಾಸ್,ಮಂಜುನಾಥ್, ವಿಕಾಶ್, ನಿಖಿಲ್ ಮತ್ತು ಹಿರಿಯ ಕ್ರೀಡಾಪಟು ಟಿ.ಕೆ.ಆನಂದ್ ಉಪಸ್ಥಿತರಿದ್ದರು.