ಶಿರಸಿ: ನಗರದ ಪ್ರಥಮ ದರ್ಜೆ ಗುತ್ತಿಗೆದಾರ ಚಂದ್ರು ನಾಯಕ್ ಅವರಿಗೆ ಭಾರತ ರತ್ನ ಸರ್.ಎಂ.ವಿಶ್ವೇಶ್ವರಯ್ಯ ಸದ್ಭಾವನಾ ಪ್ರಶಸ್ತಿ ನೀಡಿ ಗೌರವಿಸ ಲಾಗಿದೆ.
ಇತ್ತೀಚಿಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾರತ ರತ್ನ ಸರ್. ಎಮ್. ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಅವಾರ್ಡ ಕಮಿಟಿಯಿಂದ ಪ್ರಶಸ್ತಿ ನೀಡಲಾಗಿದೆ. ಕಮಿಟಿಯ ಗೌರವಾಧ್ಯಕ್ಷ ನಾರಾಯಣ ಸ್ವಾಮಿ, ಅಧ್ಯಕ್ಷ ಆರ್.ವೆಂಕಟೇಶ ಹಾಗೂ ಪದಾಧಿಕಾರಿಗಳು ಪ್ರಶಸ್ತಿ ಪ್ರದಾನ ಮಾಡಿದರು. ತಾಂತ್ರಿಕ ಕ್ಷೇತ್ರದಲ್ಲಿನ ಸೇವೆ ಗುರುತಿಸಿ ಈ ಗೌರವ ನೀಡಲಾಗಿದೆ.