ನಾಡದ್ರೋಹಿ ಕೆಲಸ ಮಾಡುತ್ತಿರುವ ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧ ಮಾಡಿ
ಬೆಳಗಾವಿ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಖಂಡಿಸಿ ನಗರದ ಚೆನ್ನಮ್ಮ ವೃತ್ತದಲ್ಲಿ ವಿವಿಧ ಕನ್ನಡಪರ ಸಂಘಟನೆ ಹೋರಾಟಗಾರರ ಪ್ರತಿಭಟನೆ ನಡೆಸುತ್ತಿದ್ದಾರೆ.
ಹುತಾತ್ಮ ದಿನದ ಹೆಸರಿನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ ಠಾಕ್ರೆ ಕನ್ನಡಿಗರನ್ನು ಕೆರಳಿಸುವ ಕಾರ್ಯಕ್ಕೆ ಮುಂದಾಗಿ ದ್ದಾರೆ. ಅಲ್ಲಿನ ಮುಖ್ಯಂತ್ರಿ ಇಲ್ಲಿನ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಯವುದಾಗಿ ಟ್ವಿಟ್ಟರ್ ನಲ್ಲಿ ಹೇಳಿಕೆ ನೀಡಿದ್ದಾರೆ. ಆದ್ರೆ, ಉದ್ಧವ ಠಾಕ್ರೆ ತಿರುಕನ ಕನಸು ಕಾಣುತ್ತಿದ್ದಾರೆ.ಅವ್ರ ಕನಸು ಸುಳ್ಳಾಗುತ್ತದೆ.ನಾವೇನು ಕನ್ನಡಿಗರು ಬಳೆ ಹಾಕಿಕೊಂಡು ಕುಳಿತಿಲ್ಲ. ಆದ್ರೆ, ಮಾಹಾರಷ್ಟ್ರ ಸಿಎಂ ಈ ತರದ ಹೇಳಿಕೆ ನೀಡುತ್ತಿದ್ದರೂ ರಾಜ್ಯದ ಮುಖ್ಯಮಂತ್ರಿ,ಯಾವೊಬ್ಬ ನಾಯಕರು ಸೂಕ್ತಕ್ರಮ ಜರಗುಸುತ್ತಿಲ್ಲ.
ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದು ಅವರು ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗಬೇಕು. ಗಡಿ ಪ್ರಕರಣ ಸುಪ್ರೀಂ ಕೋರ್ಟ್ ನಲ್ಲಿದೆ. ಇಂತಹ ಸಂದರ್ಭಗಳಲ್ಲೂ ಮಹಾರಾಷ್ಟ್ರ ಮುಖ್ಯಮಂತ್ರಿ ಇಂತಹ ಹೇಳಿಕೆ ಕೊಟ್ಟು ಕರ್ನಾಟಕದ ಕಾನೂನು ಸುವ್ಯವಸ್ಥೆ ಕಡೆಸಿಸುತ್ತಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಸೂಕ್ತ ಕ್ರಮ ಜರಗಿಸಲು ಮನವಿ ಮಾಡಿಕೊಳ್ಳಬೇಕು. ನಾಡದ್ರೋಹಿ ಕೆಲಸ ಮಾಡುತ್ತಿರಯವ ನಮ್ಮ ರಾಜ್ಯದಲ್ಲಿಯೇ ಇರುವ ಎಂಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ನಿಷೇಧ ಮಾಡಬೇಕು ಎಂದು ಒತ್ತಾಯಿಸಿದರು. ಇದೇ ವೇಳೆ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹಾಗೂ ಗಡಿ ವಿಚಾರದಲ್ಲಿ ಬೇಜವಾ ಬ್ದಾರಿ ತೋರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಇದೇ ವಿಷಯಕ್ಕೆ ಬೆಳಗ್ಗೆ 11ಗಂಟೆಗೆ ಬೃಹತ್ ವಿವಿಧ ಕನ್ನಡಪರ ಸಂಘಟ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಟ್ವಿಟ್ಟರ್ ನಲ್ಲಿ ಏನಿದೆ: ಮರಾಠಿ ಭಾಷಿಕರು ಬಹುಸಂಖ್ಯಾತರಾಗಿರುವ ಪ್ರದೇಶವನ್ನು ಮಹಾ ರಾಷ್ಟ್ರಕ್ಕೆ ಸೇರ್ಪಡೆ ಮಾಡ್ತೇವೆ. ಕರ್ನಾಟಕ ಆಕ್ರಮಿತ ಪ್ರದೇಶವನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡ್ತೇವೆ ಎಂದು ಮಹಾ ರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಹೇಳಿಕೆ ನೀಡಿದ್ದರು.