Thursday, 23rd March 2023

ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಪರಾರಿ

ಮೃತಸರ: ಪಂಜಾಬ್ ಪೊಲೀಸರಿಂದ ಪರಾರಿಯಾಗಿರುವ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಅವರನ್ನು ಪರಾರಿಯಾಗಿದ್ದಾರೆ ಎಂದು ಘೋಷಿಸಲಾಗಿದೆ.

ಪರಾರಿಯಾಗಿರುವ ಅಮೃತಪಾಲ್ ಸಿಂಗ್ ಅವರನ್ನು ಹಿಡಿಯಲು ಬೃಹತ್ ಕಾರ್ಯಾಚರಣೆ ಪ್ರಾರಂಭಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪೊಲೀಸರು ಆತನ ‘ವಾರಿಸ್ ಪಂಜಾಬ್ ದೇ’ ಸಂಘಟನೆಯ 78 ಸದಸ್ಯರನ್ನು ಬಂಧಿಸಿದ್ದಾರೆ. ಸಂಘಟನೆಯ ಇನ್ನೂ ಹಲವರನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಬಂಧಿಸಿದವರಲ್ಲಿ ಅಮೃತಪಾಲ್ ಸಿಂಗ್ ಅವರ ಆರರಿಂದ ಏಳು ಮಂದಿ ಬಂದೂಕು ಧಾರಿಗಳು ಸೇರಿದ್ದಾರೆ ಎಂದು ಜಲಂಧರ್ ಪೊಲೀಸ್ ಕಮಿಷನರ್ ಕುಲದೀಪ್ ಸಿಂಗ್ ಚಾಹಲ್ ತಿಳಿಸಿದ್ದಾರೆ. ಅಮೃತಪಾಲ್ ಸಿಂಗ್ ಅವರ ಆಪ್ತ ಸಹಾಯಕ ದಲ್ಜೀತ್ ಸಿಂಗ್ ಕಲ್ಸಿ, ಖಲಿಸ್ತಾನಿ ನಾಯಕನ ಹಣಕಾಸು ನಿರ್ವಹಣೆಯನ್ನು ಮಾಡುತ್ತಿದ್ದವರನ್ನು ಹರಿಯಾಣದ ಗುರ್ಗಾಂವ್‌ನಿಂದ ಬಂಧಿಸಲಾಗಿದೆ.

ಏಳು ಜಿಲ್ಲೆಗಳ ಸಿಬ್ಬಂದಿಯನ್ನು ಒಳಗೊಂಡ ರಾಜ್ಯ ಪೊಲೀಸರ ವಿಶೇಷ ತಂಡವು ನಿನ್ನೆ ಜಲಂಧರ್‌ನ ಶಾಕೋಟ್ ತಹಸಿಲ್‌ಗೆ ತೆರಳುತ್ತಿದ್ದಾಗ ಖಲಿಸ್ತಾನಿ ನಾಯಕನ ಬೆಂಗಾವಲು ಪಡೆಯನ್ನು ಹಿಂಬಾಲಿಸಿದೆ. ಆದರೆ, ಅಮೃತಪಾಲ್ ಸಿಂಗ್ ಪೊಲೀಸರಿಂದ ಅವರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರು ಅವರನ್ನು ಬೆನ್ನಟ್ಟುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅಮೃತಪಾಲ್ ಸಿಂಗ್ ಅವರ ಸಹಾಯಕರು ಸಾಮಾಜಿಕ ಮಾಧ್ಯಮದಲ್ಲಿ ಕೆಲವು ವೀಡಿಯೊಗಳನ್ನು ಹಂಚಿಕೊಂಡ ನಂತರ ಅಧಿಕಾರಿಗಳು ಹಲವಾರು ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ರಾಜ್ಯದಲ್ಲಿ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ. ಅಮೃತ ಸರದ ಅಮೃತಪಾಲ್ ಸಿಂಗ್ ಅವರ ಹಳ್ಳಿಯಾದ ಜಲ್ಲುಪುರ್ ಖೈರಾ ಹೊರಗೆ ಭಾರೀ ಭದ್ರತೆಯನ್ನು ಮಾಡಲಾಗಿದೆ. ಪೊಲೀಸರು ಆತನ ತಂದೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

error: Content is protected !!