Friday, 19th April 2024

ಸಿಂದಗಿ ಉಪಚುನಾವಣೆ: ರಮೇಶ್ ಭೂಸನೂರು ಆರಂಭಿಕ ಮುನ್ನಡೆ

ವಿಜಯಪುರ : ರಾಜ್ಯದಲ್ಲಿ ಹಾನಗಲ್, ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾ ವಣೆಯ ಫಲಿತಾಂಶ ಮಂಗಳವಾರ ಪ್ರಕಟ ವಾಗಲಿದ್ದು, ಮತ ಎಣಿಕೆ ಕಾರ್ಯ ಆರಂಭಗೊಂಡಿದೆ.

ಸಿಂದಗಿ ಕ್ಷೇತ್ರದಲ್ಲಿ ಮೊದಲು ಅಂಚೆ ಮತಗಳ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರು ಆರಂಭಿಕ ಮುನ್ನಡೆ ಸಾಧಿಸಿದ್ದಾರೆ.

ಕೊನೆಯ ಸುತ್ತಿನವರೆಗೂ ನಾನೇ ಮುನ್ನಡೆ ಕಾಯ್ದುಕೊಳ್ಳುತ್ತೇನೆ. ಅಂತಿಮವಾಗಿ 15 ರಿಂದ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಭೂಸನೂರು ತಿಳಿಸಿದ್ದಾರೆ.

ಅಕ್ಟೋಬರ್ 30 ರಂದು ಉಪಚುನಾವಣೆ ನಡೆದ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ್ ಹವೇಲಿಯಲ್ಲಿ ಮೂರು ಲೋಕಸಭೆ ಮತ್ತು 29 ವಿಧಾನಸಭಾ ಕ್ಷೇತ್ರಗಳಲ್ಲಿ ಮಂಗಳವಾರ ಮತ ಎಣಿಕೆ ನಡೆಯುತ್ತಿದೆ.

ಅಸ್ಸಾಂನಲ್ಲಿ ಐದು, ಪಶ್ಚಿಮ ಬಂಗಾಳದಲ್ಲಿ ನಾಲ್ಕು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಮೇಘಾಲಯದಲ್ಲಿ ತಲಾ ಮೂರು, ಬಿಹಾರ, ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ತಲಾ ಎರಡು ಮತ್ತು ಆಂಧ್ರಪ್ರದೇಶ, ಹರಿಯಾಣ, ಮಹಾರಾಷ್ಟ್ರ, ಮಿಜೋರಾಂ ಮತ್ತು ತೆಲಂಗಾಣದಲ್ಲಿ ತಲಾ ಒಂದು ಸ್ಥಾನಗಳಲ್ಲಿ ಹೆಚ್ಚಿನ ಮತದಾನವನ್ನು ಕಂಡ ವಿಧಾನಸಭಾ ಉಪ ಚುನಾವಣೆಗಳು ನಡೆದಿವೆ.

ಹಿಮಾಚಲ ಪ್ರದೇಶದಲ್ಲಿಯೂ ಮತ ಎಣಿಕೆ ನಡೆಯಲಿದ್ದು, ಫತೇಪುರ್, ಅರ್ಕಿ ಮತ್ತು ಜುಬ್ಬಲ್-ಕೋಟ್‌ಖೈ, ಕರ್ನಾಟಕದ ಸಿಂದಗಿ ಮತ್ತು ಹಾನಗಲ್, ಮಧ್ಯಪ್ರದೇಶದ ಪೃಥ್ವಿಪುರ, ರಾಯಗಾಂವ್ (ಎಸ್‌ಸಿ), ಜೊಬಾಟ್ (ಎಸ್‌ಟಿ) ಸ್ಥಾನಗಳು ಮತ್ತು ಮಹಾರಾಷ್ಟ್ರದ ದೆಗ್ಲೂರ್ (ಎಸ್‌ಸಿ) ಮೂರು ಸ್ಥಾನಗಳಿಗೆ ಮತದಾನ ನಡೆದಿದೆ.

 

Leave a Reply

Your email address will not be published. Required fields are marked *

error: Content is protected !!