ಚಿತ್ರದುರ್ಗ: ಸಂಪುಟದಲ್ಲಿ ಸ್ಥಾನ ನೀಡದ ಹಿನ್ನೆಲೆಯಲ್ಲಿ ಹಿರಿಯೂರು ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ ಸ್ಥಾನ ಸಿಗದಿರುವುದಕ್ಕೆ ಪೂರ್ಣಿಮಾ ಶ್ರೀನಿವಾಸ್ ಆಕ್ರೋಶ ವ್ಯಕ್ತಪಡಿಸಿದ್ದು, ನಿರಂತರವಾಗಿ ಪಕ್ಷಕ್ಕೆ ಶ್ರಮಿಸಿದೆ. ಚುನಾವಣೆಯ ಸಂದರ್ಭದಲ್ಲಿ ಪಕ್ಷಕ್ಕಾಗಿ ದುಡಿದಿದ್ದೇವೆ. ಆದರೂ, ಜಾಣ ಕುರುಡರಂತೆ ವರ್ತಿಸುತ್ತಿರುವುದು ನೋವು ತಂದಿದೆ ಎಂದು ಹೇಳಿದ್ದಾರೆ. ಗೊಲ್ಲ ಸಮುದಾಯಕ್ಕೆ ಒಂದೂ ಸ್ಥಾನ ನೀಡದಿರುವುದು ಬೇಸರ ತಂದಿದೆ. ಬಿಜೆಪಿಯಲ್ಲಿ ಗೊಲ್ಲ ಸಮುದಾಯದ ಏಕೈಕ ಶಾಸಕಿಯಾಗಿದ್ದೇನೆ. ನಾನು ಯಾವುದೇ ರೀತಿಯ ಪಕ್ಷವಿರೋಧಿ ಚಟುವಟಿಕೆ ಮಾಡಿಲ್ಲ. ಪಕ್ಷ […]