ನವದೆಹಲಿ : ದೇಶದ ಕೆಲ ರಾಜ್ಯಗಳಲ್ಲಿ ಮಾತ್ರವೇ ಒನ್ ನೇಷನ್ ಒನ್ ರೇಷನ್ ಕಾರ್ಡ್ ಜಾರಿಯಲ್ಲಿದೆ. ಈ ಯೋಜನೆಯನ್ನು 32 ರಾಜ್ಯಗಳಲ್ಲಿ ಜಾರಿಗೊಳಿಸಲಾಗುತ್ತಿದೆ. ಹೀಗಾಗಿ ಪಡಿತದಾರರು ಒಂದು ರಾಜ್ಯದಿಂದ ಮತ್ತೊಂದು ರಾಜ್ಯಗಳಿಗೆ ತೆರಳಿದರೂ, ಪಡಿತರ ಧಾನ್ಯಗಳನ್ನು ಪಡೆಯಬಹುದಾಗಿದೆ. ಬಜೆಟ್-2021 ಮಂಡಿಸುತ್ತಾ ತಿಳಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಕುಟುಂಬದ ಪ್ರತಿ ಸದಸ್ಯರ ಆಧಾರದ ಮೇಲೆ ಪಡಿತರ ವಿತರಣೆ ಮಾಡಲಾಗುತ್ತಿದೆ. ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆಯನ್ನು ದೇಶದ 32 ರಾಜ್ಯಗಳಿಗೆ ವಿಸ್ತರಣೆ ಮಾಡಲಾಗುತ್ತಿದೆ ಎಂಬುದಾಗಿ ಘೋಷಿಸಿದರು.
ನವದೆಹಲಿ: ಕೃಷಿ ಕಾಯ್ದೆಗಳನ್ನು ಒಂದೂವರೆ ವರ್ಷಗಳವರೆಗೂ ಅಮಾನತಿನಲ್ಲಿಡುವ ಪ್ರಸ್ತಾವನೆಗೆ ಸರ್ಕಾರ ಬದ್ಧ ಎಂದು ಶನಿವಾರ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಸೋಮವಾರ ಕೇಂದ್ರ...