Saturday, 7th September 2024

ರಂಗಪ್ರೀತಿ: ಪಿ.ತಿಪ್ಪೇಸ್ವಾಮಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಚಿತ್ರದುರ್ಗ: ಚಳ್ಳಕೆರೆ ನಗರದ ಕಾಟಪ್ಪನಹಟ್ಟಿಯ ಕಾಟಮಲಿಂಗೇಶ್ವರ ಪ್ರೌಢಶಾಲೆಯ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ಪಿ.ತಿಪ್ಪೇಸ್ವಾಮಿ ಅವರ ರಂಗಪ್ರೀತಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ.

ತಿಪ್ಪೇಸ್ವಾಮಿ ಅವರು ವೃತ್ತಿಯ ಜೊತೆಗೆ ಸಾಹಿತ್ಯ, ಸಂಗೀತ ಹಾಗೂ ರಂಗಭೂಮಿಯಲ್ಲಿ ಕೆಲಸ ಮಾಡಿದ್ದಾರೆ.

ರಕ್ತರಾತ್ರಿ, ಭಕ್ತಸುಧನ್ವ, ಕುರುಕ್ಷೇತ್ರ, ದೇವಿ ಮಹಾತ್ಮೆ, ದಾನಶೂರವೀರ ಕರ್ಣ, ವೀರಾಭಿಮಾನ್ಯು ಸೇರಿ ಪೌರಾಣಿಕ ಹಾಗೂ ಸಾಮಾಜಿಕ ನಾಟಕಗಳನ್ನು ರಂಗದ ಮೇಲೆ ತಂದಿದ್ದಾರೆ. ನಾಟಕ ನಿರ್ದೇಶನ ಮಾಡಿ ಸಂಗೀತ ನೀಡಿದ ಹೆಗ್ಗಳಿಗೆ ಇವರದು.

ಇವರ ನಿರ್ದೇಶನ ಹಾಗೂ ಸಂಗೀತದಲ್ಲಿ ಮೂಡಿಬಂದ ‘ರಾಜವೀರ ಮದಕರಿನಾಯಕ’ ನಾಟಕದ ದೆಹಲಿಯಲ್ಲಿ ಪ್ರದರ್ಶನ ಕಂಡು ದೇಶದ ಗಮನ ಸೆಳೆದಿದೆ.

ಗ್ರಾಮೀಣ ರಂಗಭೂಮಿ ಸೇವೆಗೆ 2001 ರಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಇವರಿಗೆ ಲಭಿಸಿದೆ.

Leave a Reply

Your email address will not be published. Required fields are marked *

error: Content is protected !!