Friday, 25th October 2024

ಪ್ರಿಯಾಂಕಾ ಆಪ್ತ ಸಹಾಯಕನಿಂದ ಜೀವ ಬೆದರಿಕೆ: ಬಿಗ್ ಬಾಸ್ ಸ್ಪರ್ಧಿ ಆರೋಪ

ಮೀರತ್: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಆಪ್ತ ಸಹಾಯಕ ತನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಬಿಗ್ ಬಾಸ್ ಸ್ಪರ್ಧಿ ಅರ್ಚನಾ ಗೌತಮ್ ಆರೋಪಿಸಿದ ಹಿನ್ನಲೆಯಲ್ಲಿ ಎಫ್ ಐಆರ್ ದಾಖಲಾ ಗಿದೆ.
ಬಿಗ್ ಬಾಸ್ 16ನೇ ಸೀಸನಿನ ಟಾಪ್ 5 ಫೈನಲಿಸ್ಟ್ ರಲ್ಲಿ ಒಬ್ಬರಾಗಿದ್ದ ಅರ್ಚನಾ ಗೌತಮ್ ಅವರು ಆರೋಪ ಮಾಡಿದ್ದು, ಈ ಕುರಿತಂತೆ ಮೀರತ್ನ ಪರ್ತಾಪುರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಿಯಾಂಕಾ ಅವರ ಆಪ್ತ ಸಹಾಯಕ ಸಂದೀಪ್ ಸಿಂಗ್ ನನ್ನ ವಿರುದ್ಧ ಜಾತಿ ನಿಂದನೆ ಮಾಡಿದ್ದಾರೆ ಎಂದು ದೂರಿದ್ದಾರೆ.
ಪ್ರಿಯಾಂಕಾ ಗಾಂಧಿಯವರ ಆಹ್ವಾನದ ಮೇರೆಗೆ ಕಾಂಗ್ರೆಸ್ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ಫೆಬ್ರವರಿ 26 ರಂದು ಛತ್ತೀಸ್ಗಢದ ರಾಯ್ಪುರಕ್ಕೆ ತಮ್ಮ ಪುತ್ರಿ ಅರ್ಚನಾ ತೆರಳಿದ್ದ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ಅವರ ನ್ನು ಭೇಟಿ ಮಾಡಿಸುವಂತೆ ಅವರ ಆಪ್ತ ಸಹಾಯಕರನ್ನು ಕೇಳಿಕೊಂಡಿದ್ದರು. ಆದರೆ, ಆಕೆಯನ್ನು ಪ್ರಿಯಾಂಕಾ ಗಾಂಧಿಗೆ ಪರಿಚಯಿಸಲು ನಿರಾಕರಿಸಿದ್ದ.
ಅರ್ಚನಾ ಅವರ ತಂದೆ ಗೌತಮ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಮೀರತ್ ಎಸ್ಪಿ ಪಿಯೂಷ್ ಸಿಂಗ್ ತಿಳಿಸಿದ್ದಾರೆ.