Saturday, 7th September 2024

‘ದಿ ಕೇರಳ ಸ್ಟೋರಿ’ ಪ್ರದರ್ಶನಕ್ಕೆ ನಿಷೇಧ: ಮೇ 12ರಂದು ವಿಚಾರಣೆ

ತಿರುವನಂತಪುರಂ: ಪಶ್ಚಿಮಬಂಗಾಳದಲ್ಲಿ “ದಿ ಕೇರಳ ಸ್ಟೋರಿ’ ಪ್ರದರ್ಶನ ನಿಷೇಧಿಸಿರುವ ರಾಜ್ಯ ಸರ್ಕಾರದ ನಿರ್ಣಯ ಪ್ರಶ್ನಿಸಿ, ಸಲ್ಲಿಸಿರುವ ಅರ್ಜಿಯನ್ನು ಮೇ 12ರಂದು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್‌ ಸಮ್ಮತಿಸಿದೆ.

ನಿಷೇಧದಿಂದಾಗಿ ತಂಡಕ್ಕೆ ಅಪಾರ ಹಣಕಾಸು ನಷ್ಟವಾಗುತ್ತಿರುವ ಹಿನ್ನೆಲೆ ಅರ್ಜಿಯನ್ನು ತುರ್ತು ವಿಚಾರಣೆಗೆ ಪರಿಗಣಿಸುವಂತೆ ಹಿರಿಯ ವಕೀಲ ಹರೀಶ್‌ ಸಾಳ್ವೆ ಮನವಿ ಮಾಡಿ ದ್ದರು.

ಈ ಹಿನ್ನೆಲೆ ಸುಪ್ರೀಂಕೋರ್ಟ್‌ ಮುಖ್ಯನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್‌ ನೇತೃತ್ವದ ನ್ಯಾಯಪೀಠ, ಶುಕ್ರವಾರ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸುವುದಾಗಿ ತಿಳಿಸಿದೆ.

ಅರ್ಜಿಯಲ್ಲಿ ಬಂಗಾಳ ಸರ್ಕಾರದ ನಿಷೇಧ ಪ್ರಶ್ನಿಸಿರುವುದಲ್ಲದೇ, ತಮಿಳುನಾಡಿನಲ್ಲಿ ಸಿನಿಮಾ ಪ್ರದರ್ಶನಕ್ಕ ಎದುರಾಗಿರುವ ಅಡಚಣೆ ಬಗ್ಗೆಯೂ ಪ್ರಸ್ತಾಪಿಸಲಾಗಿದೆ.

error: Content is protected !!