ದಿಲ್ಲಿ ಹೈಕೋರ್ಟ್, ಸಂಜಯ್ ಗಾಂಧಿ ಮೆಮೋರಿಯಲ್ ಟ್ರಸ್ಟ್, ಜವಾಹರ್ ಭವನ್ ಟ್ರಸ್ಟ್, ರಾಜೀವ್ ಗಾಂಧಿ ಫೌಂಡೇಷನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್, ಯಂಗ್ ಇಂಡಿಯನ್ ಮತ್ತು ಆಮ್ ಆದ್ಮಿ ಪಾರ್ಟಿ ಸಲ್ಲಿಸಿರುವ ಇದೇ ರೀತಿಯ ಅರ್ಜಿಗಳನ್ನು ವಜಾಗೊಳಿಸಿದೆ.
ಆದಾಯ ತೆರಿಗೆ ಇಲಾಖೆಯ ಕೇಂದ್ರೀಯ ವೃತ್ತಗಳು ತೆರಿಗೆ ವಂಚನೆ ಪ್ರಕರಣಗಳ ಪರಿಶೀಲನೆ ನಡೆಸುತ್ತವೆ. ಕಾನೂನು ಪ್ರಕಾರವೇ ತೆರಿಗೆ ಇಲಾಖೆ ತನ್ನ ನಿರ್ಧಾರವನ್ನು ತೆಗೆದುಕೊಂಡಿವೆ. ಆದ್ದರಿಂದ ರಿಟ್ ಅರ್ಜಿಗಳನ್ನು ವಜಾಗೊಳಿಸಲಾಗಿದೆ ಎಂದು ನ್ಯಾಯಮೂರ್ತಿ ಮನಮೋಹನ್ ಮತ್ತು ದಿನೇಶ್ ಕುಮಾರ್ ಶರ್ಮಾ ಅವರನ್ನು ಒಳಗೊಂಡಿದ್ದ ಪೀಠವು ಹೇಳಿದೆ.