Thursday, 19th September 2024

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಆರು ಸಾವು

ಪೂರ್ವ ಗೋದಾವರಿ: ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಆರು ಜನ ಸಾವನ್ನಪ್ಪಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಂಡು ಬಂದಿದೆ.

ನಲ್ಲಜರ್ಲಾ ತಾಲೂಕಿನ ಅನಂತಪಲ್ಲಿ ಉಪನಗರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಇತರರು ಗಾಯ ಗೊಂಡಿರುವುದಾಗಿ ವರದಿಯಾಗಿದೆ.

ರಾಜಮಹೇಂದ್ರವರಂನ ಪ್ರಕಾಶನಗರದ 8 ಜನರು ಹೈದರಾಬಾದ್‌ನಲ್ಲಿ ಮದುವೆಯಲ್ಲಿ ಭಾಗವಹಿಸಿ ತಮ್ಮ ಊರಿಗೆ ಮರಳುತ್ತಿದ್ದರು. ಈ ಅನುಕ್ರಮದಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ನಲ್ಲಜರ್ಲಾ ತಾಲೂಕಿನ ಅನಂತಪಳ್ಳಿಯ ಉಪನಗರದಲ್ಲಿ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.

ಈ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಸತ್ತಿ ಬಾಬು, ರವಿತೇಜ, ಶ್ರಾವಣಿ ಕುಮಾರಿ, ಅರುಣ, 8 ತಿಂಗಳ ಮಗು ಎಂದು ಗುರುತಿಸಲಾಗಿದೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸಿದ ಕೂಡಲೇ ಸ್ಥಳೀಯರು ರಕ್ಷಣಾ ಕಾರ್ಯ ಕೈಗೊಂಡು ಪೊಲೀಸರಿಗೆ ಮಾಹಿತಿ ತಿಳಿಸಿದರು. ಬಳಿಕ ಸ್ಥಳೀಯರು ಗಾಯಾಳುಗಳನ್ನು ರಾಜಮಹೇಂದ್ರವರಂ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಗೊಂಡವರಲ್ಲಿ ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತಕ್ಕೀಡಾದ ಆರು ಜನರಲ್ಲಿ ಮೂವರು ಮಹಿಳೆಯರು ಮತ್ತು ಒಂದು ಮಗು ಮೃತಪಟ್ಟಿರುವುದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ ಎಂದು ಕೊವ್ವೂರು ಡಿಎಸ್ಪಿ ವರ್ಮಾ ತಿಳಿಸಿದ್ದಾರೆ.