Friday, 20th September 2024

ಪೆಟ್ರೋಲ್ ಬಂಕ್’ನಲ್ಲಿ ಭಾರೀ ಅಗ್ನಿ ಅವಘಡ: ಎಂಟು ಮಂದಿಗೆ ಗಾಯ

ಭುವನೇಶ್ವರ : ರಾಜಭವನದ ಬಳಿಯ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೆಟ್ರೋಲ್ ಬಂಕ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿ, ಎಂಟು ಮಂದಿ ಗಾಯಗೊಂಡರು.

ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಕಟಕ್ ನ ಎಸ್ ಸಿಬಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಉಳಿದವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಮೂರು ಅಗ್ನಿಶಾಮಕ ದಳಗಳು ಕಾರ್ಯ ಪೂರೈಸಿದ್ದು, ಪೆಟ್ರೋಲ್ ಪಂಪ್ ನಲ್ಲಿ ಬೆಂಕಿಯನ್ನು ಹತೋಟಿಗೆ ತಗೆದುಕೊಳ್ಳುವು ದಾಗಿ ಅಧಿಕಾರಿಗಳು ತಿಳಿಸಿದ್ದಾರೆ.  ಎರಡು ಟ್ಯಾಂಕರ್ ಗಳಿಂದ ಇಂಧನವನ್ನು ಹೊರಹಾಕಲು ತಕ್ಷಣ ಕ್ರಮ ಕೈಗೊಳ್ಳುವಂತೆ ಐಒಸಿಎಲ್ ಗೆ ಸೂಚಿಸಿದ್ದು, ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ ಎಂದು ಸಾರಂಗಿ ತಿಳಿಸಿದ್ದಾರೆ.

ಇದೇ ವೇಳೆ, ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಮುಖ್ಯಮಂತ್ರಿ ನವೀನ್ ಪಟ್ನಾಯಕ್ ತಿಳಿಸಿದ್ದು, ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.